July 23, 2026
Mumbai News Kannada
ಪ್ರಕಟಣೆ

ಶ್ರೀ ಚಕ್ರಪೀಠ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ







ಉಡುಪಿ, ಸೆಪ್ಟೆಂಬರ್ 22: ಉಡುಪಿಯ ದೊಡ್ಡಣ್ಣ ಗುಡ್ಡೆಯಲ್ಲಿರುವ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ವತಿಯಿಂದ ಶರನ್ನವರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಈ ಮಹೋತ್ಸವದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಿರಂತರ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮಗಳು

​ಮಹೋತ್ಸವದ ಅಂಗವಾಗಿ ಪ್ರತಿದಿನ ಭಕ್ತರ ಸೇವಾರೂಪದಲ್ಲಿ ಜೋಡಿ ಚಂಡಿಕಾಯಾಗ, ಶ್ರೀ ದುರ್ಗಾ ನಮಸ್ಕಾರ ಪೂಜೆ, ಸಹಸ್ರನಾಮ ಅರ್ಚನೆ, ರಂಗಪೂಜೆ, ದೀಪಾರಾಧನೆ, ತುಲಾಭಾರ ಸೇವೆ ಮತ್ತು ವಿದ್ಯಾರಂಭಗಳು ನೆರವೇರಲಿವೆ.

  • ಸೆಪ್ಟೆಂಬರ್ 24: ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿ ಸನ್ನಿಧಾನದಲ್ಲಿ ಲಕ್ಷ್ಮಿ ಸಹಸ್ರನಾಮ ಮಹಾಯಾಗ ನಡೆಯಲಿದೆ.
  • ಸೆಪ್ಟೆಂಬರ್ 27 (ಲಲಿತಾ ಪಂಚಮಿ): ಶ್ರೀ ಲಲಿತಾ ಸಹಸ್ರ ಕದಳೀ ಯಾಗ ನಡೆಯಲಿದೆ.
  • ಅಕ್ಟೋಬರ್ 2 (ವಿಜಯದಶಮಿ): ಸಾಮೂಹಿಕವಾಗಿ ತ್ರಿಶಕ್ತಿ ಮಹಾಯಾಗ, ಸಂಜೆ ಬಲಿ ಉತ್ಸವದ ಜೊತೆಗೆ ಆರಾಧನಾ ರಂಗಪೂಜಾ ಮಹೋತ್ಸವ, ಮಹಾ ಸಂಪ್ರೋಕ್ಷಣೆ ಮತ್ತು ಮಹಾ ಮಂತ್ರಾಕ್ಷತೆ ಸಂಪನ್ನಗೊಳ್ಳಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು

​ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗಾನ, ನಾಟ್ಯ ಹಾಗೂ ನಾದಪ್ರಿಯರಾದ ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ವಿವಿಧ ಕಲಾವಿದರಿಂದ ನಾಟ್ಯ ಸೇವೆ, ಸಂಗೀತ ಸೇವೆ ಮತ್ತು ನಾದ ಸೇವೆಗಳು ಸಮರ್ಪಿತವಾಗಲಿವೆ. ಈ ಬಗ್ಗೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.



Related posts

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಡೊಂಬಿವಲಿ ಶ್ರೀ ಜಗದಂಬಾ ಮಂದಿರ: ಏಪ್ರಿಲ್ 4 ಮತ್ತು 5ರಂದು 11ನೇ ವಾರ್ಷಿಕ ಮಹೋತ್ಸವ

Mumbai News Desk

ಮೈಸೂರು ಅಸೋಸಿಯೇಷನ್, ಮುಂಬೈ ನ.25 ರಂದು ಕನಕ ಜಯಂತಿ ಆಚರಣೆ

Mumbai News Desk

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾಗೇಟ್ ಶಹಾಡ್ : ಎ. 12ರಿಂದ ಎ. 21ರ ತನಕ 63ನೇ ವಾರ್ಷಿಕೋತ್ಸವ, 10ನೇ ಪ್ರತಿಷ್ಠ ವರ್ಧಂತಿ ಉತ್ಸವ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) – ಸೆ. 5ರಂದು ಮುಂಬಯಿಯಲ್ಲಿ ವೈಭವದ ಸಂಸ್ಥಾಪನಾ ದಿನಾಚರಣೆ – 25 ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk