32 C
Mumbai
March 7, 2026
Mumbai News Kannada
ಸುದ್ದಿ

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ





​ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ, ಹಾಗೂ ಪ್ರಸಿದ್ಧ ಜೀವವಿಮಾ ಸಲಹೆಗಾರರಾದ ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆರ್. ಕೆ. ಶೆಟ್ಟಿ ಆಂಡ್ ಕಂಪನಿಯ ಆಡಳಿತ ನಿರ್ದೇಶಕರಾದ ಡಾ. ಆರ್. ಕೆ. ಶೆಟ್ಟಿ ಅವರಿಗೆ ಭಾರತೀಯ ಜೀವವಿಮಾ ನಿಗಮದಿಂದ (ಎಲ್ಐಸಿ) ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ ಪುರಸ್ಕಾರ ಲಭಿಸಿದೆ.

​ಭಾರತೀಯ ಜೀವವಿಮಾ ನಿಗಮದ ಕೇಂದ್ರ ಕಚೇರಿ ವತಿಯಿಂದ ಮುಂಬೈನ ನರಿಮಾನ್ ಪಾಯಿಂಟ್‌ನಲ್ಲಿರುವ ಯೋಗ ಕ್ಷೇಮ ಸಭಾಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು. ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್‌ನ ಅಧ್ಯಕ್ಷ ಆಲಿಸ್ಟೇರ್ ರಿಚರ್ಡ್ಸ್ ಸಹಿ ಹಾಕಿರುವ ಪ್ರಮಾಣಪತ್ರವನ್ನು ಎಲ್ಐಸಿ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಿದ್ಧಾರ್ಥ ಮೋಹಂತಿ ಅವರು ಡಾ. ಆರ್. ಕೆ. ಶೆಟ್ಟಿ ಅವರಿಗೆ ಹಸ್ತಾಂತರಿಸಿ ಅಭಿನಂದಿಸಿದರು.

​ಡಾ. ಆರ್. ಕೆ. ಶೆಟ್ಟಿ ಅವರು ಈ ಹಿಂದೆ ಗ್ಲೋಬಲ್ ಇಂಡಿಯನ್ ಅವಾರ್ಡ್, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಂದ ಗೌರವ, 2024ರ ಸಾಲಿನ ಬಂಟರತ್ನ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದಿದ್ದಾರೆ. ಈ ಸಾಧನೆಯ ಮೂಲಕ ಅವರು ಭಾರತೀಯ ಜೀವವಿಮಾ ನಿಗಮದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿ, ತಮ್ಮ ಹೆಸರನ್ನು ವಿಶ್ವದಾಖಲೆಯಲ್ಲಿ ದಾಖಲಿಸಿಕೊಂಡ ಭಾರತೀಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

​2025ರ ಜನವರಿ 20ರಂದು ಕೇವಲ 24 ಗಂಟೆಗಳ ಒಳಗೆ ದೇಶದಾದ್ಯಂತ ಒಟ್ಟು 5,88,107 ಜೀವ ವಿಮಾ ಪಾಲಿಸಿಗಳನ್ನು ಮಾರಾಟ ಮಾಡುವ ಮೂಲಕ ಅವರ ಸೇವೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ. ಒಂದೇ ದಿನದಲ್ಲಿ ಅತಿ ಹೆಚ್ಚು ಜೀವ ವಿಮಾ ಪಾಲಿಸಿಗಳನ್ನು ಮಾರಾಟ ಮಾಡಿದ್ದು, ಸಂಸ್ಥೆಯ ಸಾಮರ್ಥ್ಯ ಮತ್ತು ವಿಶ್ವಾಸಾರ್ಹತೆಗೆ ಮತ್ತೊಂದು ಸಾಕ್ಷಿಯಾಗಿದೆ.

​ಶತಮಾನದ ಇತಿಹಾಸದಲ್ಲೇ ಎಂಡಿಆರ್‌ಟಿ ವಿಭಾಗೀಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಡಾ. ಆರ್. ಕೆ. ಶೆಟ್ಟಿ ಅವರು 2025ರ ಆಗಸ್ಟ್‌ನಲ್ಲಿ ಚೀನಾದ ಮಕಾವುನಲ್ಲಿ ನಡೆದ ಮಿಲಿಯನ್ ಡಾಲರ್ ರೌಂಡ್ ಟೇಬಲ್ ಜಾಗತಿಕ ಸಮ್ಮೇಳನದಲ್ಲಿ ಪ್ರಧಾನ ಭಾಷಣಕಾರರಾಗಿ ಆಯ್ಕೆಯಾಗಿ ವಿಶ್ವದ ಗಮನ ಸೆಳೆದಿದ್ದರು. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಸಾಧನ ಪುರಸ್ಕಾರ ಸೇರಿದಂತೆ ನೂರಾರು ಪ್ರಶಸ್ತಿ-ಗೌರವಗಳಿಗೆ ಅವರು ಪಾತ್ರರಾಗಿದ್ದಾರೆ.



Related posts

ನ್ಯೂ ಪನ್ವೇಲ್ ನ ನಗರ ಸೇವಕ ಸಂತೋಷ್ ಜಿ ಶೆಟ್ಟಿ ಸಾಯೋಗದಲ್ಲಿ ಶ್ರೀ ಜೈ ಅಂಬೇ ಮಾತಾ ಮಂದಿರ ದ ಮೈದಾನದಲ್ಲಿ  ಶ್ರೀ ರಾಮ ಮಹೋತ್ಸವ ಸಂಭ್ರಮ ಆಚರಣೆ .

Mumbai News Desk

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk

ಬೆಂಗಳೂರಲ್ಲಿ ಮುಂಬಯಿಯ ನಿಶಿತ ಸೂರ್ಯಕಾಂತ್ ಸುವರ್ಣರ ಇಮೇಜ್ ಕನ್ಸಲ್ಟೆಂಟ್ ನ ಅದ್ದೂರಿಯ ಕರ್ನಾಟಕ ಸ್ಟೈಲ್ ಐಕಾನ್ 2023 ಕಾರ್ಯಕ್ರಮ

Mumbai News Desk

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk

ಉಡುಪಿ : ಕೋಡಿಬೆಂಗ್ರೆ ಮಗುಚಿ ಬಿದ್ದ ಟೂರಿಸ್ಟ್ ಬೋಟ್, ಇಬ್ಬರು ಸಾವು

Mumbai News Desk