31 C
Mumbai
June 8, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸೆ. 27 ರಂದು ನವರಾತ್ರಿ ಉತ್ಸವ .ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್





ಮುಂಬೈ: ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ವತಿಯಿಂದ ಸೆಪ್ಟೆಂಬರ್ 27ರಂದು ನವರಾತ್ರಿ ಉತ್ಸವವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್‌ನಲ್ಲಿರುವ ಅವೆನ್ಯೂ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಸಂಜೆ 3 ಗಂಟೆಗೆ ನಡೆಯಲಿದೆ.

​ಈ ಉತ್ಸವದಲ್ಲಿ ‘ಹರಿನಾಮ ಸಂಕೀರ್ತನೆ’, ‘ಶ್ರೀ ಲಲಿತ ಸಹಸ್ರನಾಮಾವಳಿ ಪಠಣ’, ‘ಕಿರು ಸಭಾ ಕಾರ್ಯಕ್ರಮ’, ‘ಸಾಂಪ್ರದಾಯಿಕ ಗರ್ಭಾ ನೃತ್ಯ’ ಮತ್ತು ‘ಪ್ರಸಾದ ಭೋಜನ’ ಒಳಗೊಂಡಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

​ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮತ್ತು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವು ನಡೆಯಲಿದೆ. ಸಂಘದ ಪಶ್ಚಿಮ ವಲಯದ ಸಮನ್ವಯಕರಾದ ಖಾಂದೇಶ್ ಭಾಸ್ಕರ್ ಶೆಟ್ಟಿ, ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ ಮತ್ತು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ ಅವರು ಉಪಸ್ಥಿತರಿರಲಿದ್ದಾರೆ.

​ಈ ಕಾರ್ಯಕ್ರಮಕ್ಕೆ ಸಂಘದ ಸದಸ್ಯರು ಮತ್ತು ಸಮಾಜದ ಬಂಧುಗಳು ಆಗಮಿಸಿ ಯಶಸ್ವಿಗೊಳಿಸುವಂತೆ ಬಂಟರ ಸಂಘ ಮುಂಬಯಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ. ಈ ವಿನಂತಿಯನ್ನು ಮಾಡಿದವರಲ್ಲಿ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್.ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿ.ಎ. ರಮೇಶ್ ಬಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಆರ್. ಶೆಟ್ಟಿ ತೆಲ್ಲಾರ್, ಜೊತೆ ಕೋಶಾಧಿಕಾರಿ ಶಶಿಧರ ಕೆ. ಶೆಟ್ಟಿ ಇನ್ನಂಜೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ. ಶೆಟ್ಟಿ, ಪ್ರಾದೇಶಿಕ ಸಮಿತಿಯ ಉಪಕಾರ್ಯಾಧ್ಯಕ್ಷ ಗಂಗಾಧರ ಎ. ಶೆಟ್ಟಿ, ಕಾರ್ಯದರ್ಶಿ ರಮೇಶ್ ಎಂ. ಶೆಟ್ಟಿ, ಕೋಶಾಧಿಕಾರಿ ಅವಿನಾಶ್ ಎಂ. ಶೆಟ್ಟಿ, ಜೊತೆ ಕಾರ್ಯದರ್ಶಿ ಜಯ ಶೆಟ್ಟಿ, ಜೊತೆ ಕೋಶಾಧಿಕಾರಿ ರಮೇಶ್ ಹೆಚ್. ಶೆಟ್ಟಿ, ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸಂಚಾಲಕಿ ಶೈಲಜಾ ಎ. ಶೆಟ್ಟಿ, ಉಪಕಾರ್ಯಾಧ್ಯಕ್ಷೆ ರೇಖಾ ವೈ. ಶೆಟ್ಟಿ, ಕಾರ್ಯದರ್ಶಿ ಸರಿತಾ ಎಂ. ಶೆಟ್ಟಿ, ಕೋಶಾಧಿಕಾರಿ ಶುಭಾಂಗಿ ಎಸ್. ಶೆಟ್ಟಿ, ಜೊತೆ ಕಾರ್ಯದರ್ಶಿ ಯೋಗಿನಿ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿ ಪ್ರಭಾವತಿ ಹೆಚ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಕ್ಷಜ್ ಆರ್. ಶೆಟ್ಟಿ, ಉಪಕಾರ್ಯಾಧ್ಯಕ್ಷ ಪ್ರಜ್ವಲ್ ಶೆಟ್ಟಿ, ಕಾರ್ಯದರ್ಶಿ ಸಮೀಕ್ಷಾ ಶೆಟ್ಟಿ, ಕೋಶಾಧಿಕಾರಿ ವಿಭಾ ಶೆಟ್ಟಿ, ಜೊತೆ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಜೊತೆ ಕೋಶಾಧಿಕಾರಿ ವಿಶ್ವಾಸ್ ಶೆಟ್ಟಿ, ಮುಖ್ಯ ಸಲಹೆಗಾರರಾದ ಮನೋಹರ ಎನ್. ಶೆಟ್ಟಿ, ನಿತ್ಯಾನಂದ ಹೆಗ್ಡೆ, ವಿಜಯ ಆರ್. ಭಂಡಾರಿ, ರವೀಂದ್ರ ಎಸ್. ಶೆಟ್ಟಿ ಮತ್ತು ಎರ್ಮಾಳ್ ಹರೀಶ್ ಶೆಟ್ಟಿ ಹಾಗೂ ಸಲಹಾ ಸಮಿತಿ, ಕಾರ್ಯಾಕಾರಿ ಸಮಿತಿ, ಉಪಸಮಿತಿ, ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ.



Related posts

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ೨೦೨೫-೨೬ ರ ಸಾಫಲ್ಯ ಭಾಗ್ಯ ಹಾಗು ವಿದ್ಯಾರ್ಥಿಗಳಿಗೆ ಸಹಾಯ ನಿಧಿಗೆ ಅರ್ಜಿ ಸ್ವೀಕಾರ.

Mumbai News Desk

ಡಿ.3ರಂದು ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಷಷ್ಠಿಯಬ್ದ ಮಹೋತ್ಸವ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk

ಜ.20 ಕ್ಕೆ ಉಡುಪಿಯಲ್ಲಿ ಡೈಕಿನ್ ಸೊಲ್ಯೂಷನ್ ಪ್ಲಾಜ ಷೋರೂಮ್ ಶುಭಾರಂಭ

Mumbai News Desk