32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ





ಥಾಣೆ ಪಶ್ಚಿಮ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ, ಜ್ಯೋತಿಷಿ ಶಿವ ಪ್ರಸಾದ್ ಪೂಜಾರಿ ಪುತ್ತೂರು ಸ್ಥಾಪಿಸಿ, ಖ್ಯಾತಿಯಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 26/09/2025ರ ಶುಕ್ರವಾರದಂದು ಶರನ್ನವರಾತ್ರೋತ್ಸವದnನಿಮಿತ್ತ ಶ್ರೀ ಜಗದೀಶ್ ಎಸ್ ತಂತ್ರಿಯವರ ಮಾರ್ಗದರ್ಶನದಲ್ಲಿ ಬೆಳಿಗ್ಗೆ ಗಂಟೆ 09:00 ರಿಂದ ಮಧ್ಯಾಹ್ನ ಗಂಟೆ 12:00 ರವರೆಗೆ “ವಿಶೇಷ ದುರ್ಗಾ ಹೋಮ (ಯಾಗ)” ನಂತರ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ಹಾಗೂ ಗಂಟೆ 01:00 ಕ್ಕೆ ಅನ್ನ ಸಂತರ್ಪಣೆಯು ನಡೆಯಲಿದೆ.
ಸಾಯಂಕಾಲ ಗಂಟೆ 04:00 ರಿಂದ 06:00 ರವರೆಗೆ “ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ” ಸೇವೆಯು ನಡೆದು ಸಾಯಂಕಾಲ ಗಂಟೆ 06:00 ರಿಂದ ರಾತ್ರಿ ಗಂಟೆ 08:00 ರವರೆಗೆ “ಶ್ರೀ ಸಾಯಿ ನಿತ್ಯಾನಂದ ಭಜನಾ ಮಂಡಳಿ, ಬೈಪಾಸ್ ಭಿವಂಡಿ ” ಇವರಿಂದ ಭಜನೆ ನಡೆಯಲಿದೆ. ಮತ್ತು ಶ್ರೀ ದೇವಿಗೆ “ವಿಶೇಷ ರಂಗ ಪೂಜೆ” ನಡೆದು ಮಹಾ ಮಂಗಳಾರತಿಯು ನಡೆಯಲಿದೆ.
ಈ ಸುಸಂದರ್ಭದಲ್ಲಿ ಭಕ್ತಾಭಿಮಾನಿಗಳೆಲ್ಲರೂ ಪಾಲ್ಗೊಂಡು ಅಮ್ಮನವರ ತೀರ್ಥಪ್ರಸಾದವನ್ನು ಸ್ವೀಕರಿಸುವಂತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ,
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.



Related posts

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk

ಜ. 24/25/26 : ಬಿಲ್ಲವರ ಎಸೋಸಿಯೇಷನ್ ಮುಂಬಯಿ ಇದರ ಸಾಂಸ್ಕೃತಿಕ ಉಪ ಸಮಿತಿಯ ಆಶ್ರಯದಲ್ಲಿ ‘ ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ ‘

Mumbai News Desk

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ

Mumbai News Desk

ಡಿ.9 ರಂದು ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ ಕಾಂದಿವಲ ಇದರ ವತಿಯಿಂದ 49ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥಪಾರಾಯಣ ಮಹೋತ್ಸವ 

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

Mumbai News Desk