July 23, 2026
Mumbai News Kannada
ಪ್ರಕಟಣೆ

ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ







ಮುಂಬೈಯ ಹಿರಿಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಬಿಲ್ಲವರ ಎಸೋಸಿಯೇಷನ್ ನ ವಿದ್ಯಾ ಉಪ ಸಮಿತಿಯ ಆಯೋಜನೆಯಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣ ಕಾರ್ಯಕ್ರಮ ಸೆಪ್ಟೆಂಬರ್ 28ರ ಆದಿತ್ಯವಾರ, ಮಧ್ಯಾಹ್ನ 3 ಗಂಟೆಗೆ ಸಂತಾಕ್ರೂಜ್ ಪೂರ್ವದ ಬಿಲ್ಲವ ಭವನದ ಶ್ರೀ ನಾರಾಯಣ ಗುರು ಸಭಾಗ್ರಹದಲ್ಲಿ ಜರಗಲಿದೆ.
ಎಸೋಸೋಯೇಶನ್ ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ವಿಶ್ವಾತ್ ಕೆಮಿಕಲ್ಸ್ ನ ಸಿಎಂ ಡಿ ವಿವೇಕ್ ಶೆಟ್ಟಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು.
ಗೌರವ ಅತಿಥಿಗಳಾಗಿ ಎಸ್. ಎಂ ಶೆಟ್ಟಿ ಕಾಲೇಜ್ ಪೊವಾಯಿಯ ಕಾರ್ಯಧ್ಯಕ್ಷ, ಹಾಗೂ ಶ್ರೀರಥ್ ಫೈನಾನ್ಸ್ ನ ಸಿಎಂಡಿ ಮುಂಡ್ಕುರು ರತ್ನಾಕರ್ ಶೆಟ್ಟಿ, ಸಿಎ ಗಂಗಾಧರ್ ಎಸ್ ಪೂಜಾರಿ, ಬೀದರ್ ನ ಮಾಜಿ ಜಿಲ್ಲಾ ಅರೋಗ್ಯ ಮೇಲ್ವಿಚಾರಕಿ ಶುಭಾವತಿ ಎಸ್ ಆಗಮಿಸಲಿರುವರು.
ನ್ಯಾಯವಾದಿ ಅನಘ ನಿಮ್ಬಕರ್ ಲೀಗಲ್ ಕ್ಯಾರಿಯರ್ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲಿರುವರು.
ಇದೇ ಸಂದರ್ಭದಲ್ಲಿ ಅಸೋಸಿಯೇಷನ್ನ ನೂತನ ವೆಬ್ಸೈಟ್ ನ್ನು ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ನ ಕಾರ್ಯಧ್ಯಕ್ಷ ಎನ್. ಟಿ. ಪೂಜಾರಿ ಉದ್ಘಾತಟಿಸಲಿರುವರು.
ವಿದ್ಯಾರ್ಥಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ
ಅಸೋಸಿಯೇಷನ್ನ ಗೌರವ ಅಧ್ಯಕ್ಷರಾದ ಎಲ್ ವಿ ಅಮೀನ್, ಅಧ್ಯಕ್ಷ ಹರೀಶ್ ಜಿ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ ಸಾಲಿಯಾನ್, ಗೌರವ ಕೋಶಾಧಿಕಾರಿ ರವಿ ಸನಿಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೋಟ್ಯಾನ್, ವಿದ್ಯಾ ಉಪ ಸಮಿತಿಯ ಕಾರ್ಯಧ್ಯಕ್ಷ ವಿಶ್ವನಾಥ್ ತೋನ್ಸೆ, ಕಾರ್ಯದರ್ಶಿ ಹರೀಶ್ ಪೂಜಾರಿ ಕೊಕ್ಕರ್ಣೆ, ಸಾಮಾಜಿಕ ಜಾಲತಾಣ ಉಪ ಸಮಿತಿಯ ಕಾರ್ಯಧ್ಯಕ್ಷ ಸುರೇಶ್ ಅಂಚನ್, ಕಾರ್ಯದರ್ಶಿ ನವೀನ್ ಚಂದ್ರ ಅಮೀನ್ ಪ್ರಕಟಣೆ ಮೂಲಕ ಕೇಳಿಕೊಂಡಿದ್ದಾರೆ.



Related posts

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk

ವರ್ಲಿ : ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ (ರಿ), ನ 17 ರಂದು ಮಾಲೆ ಧಾರಣೆ

Mumbai News Desk

ಸಾರ್ವಜನಿಕ ಶ್ರೀ ಶನಿಶ್ಚರ ಸೇವಾ ಸಮಿತಿ, ವಸಾಯಿ : ಫೆ. 14ರಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿಶ್ಚರ ಮಹಾಪೂಜೆ

Mumbai News Desk

ಜುಲೈ 27ರಂದು ಶ್ರೀ ರಜಕ ಸಂಘ ಮುಂಬಯಿಯ 86ನೇ ವಾರ್ಷಿಕ ಮಹಾ ಸಭೆ

Mumbai News Desk

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.

Mumbai News Desk

ಮುಂಬೈ: ಜೂನ್ 14ರಂದು ಶ್ರೀ ಭುವನೇಶ್ವರಿ ಸೇವಾ ಸಮಿತಿಯಿಂದ 43ನೇ ವಾರ್ಷಿಕ ಮಹೋತ್ಸವ ಮತ್ತು ಮೂರ್ತಿ ಪ್ರತಿಷ್ಠಾಪನಾ ಪೂಜೆ

Mumbai News Desk