September 6, 2026
Mumbai News Kannada
ಸುದ್ದಿ

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ





ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ’ ಎಂದಿದ್ದಾರೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳು ಕೇವಲ ಒಂದೇ ಒಂದು ರೈಲಿನಿಂದ ಸಂಪರ್ಕ ಹೊಂದಿದ್ದವು. ಆ ರೈಲು ಉದ್ಯಾನ ಎಕ್ಸ್‌ಪ್ರೆಸ್ ಆಗಿದ್ದು, ಈ ಪ್ರಯಾಣವನ್ನು ಪೂರ್ಣಗೊಳಿಸಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ.

ಕಳೆದ ಮೂರು ದಶಕಗಳಲ್ಲಿ ಎರಡೂ ನಗರಗಳ ಬೆಳವಣಿಗೆಯ ಹೊರತಾಗಿಯೂ, ಬೆಂಗಳೂರು ಮತ್ತು ಮುಂಬೈ ನಡುವೆ ಕೇವಲ ಒಂದು ಸೂಪರ್‌ಫಾಸ್ಟ್ ರೈಲು ಮಾತ್ರ ಇತ್ತು. ಕಳೆದ ವರ್ಷವೊಂದರಲ್ಲೇ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡು ನಗರಗಳ ನಡುವೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಹೊಸ ಸೇವೆಯು ಲಕ್ಷಾಂತರ ನಾಗರಿಕರಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಅನುಕೂಲಕರವಾಗಿಸಲಿದೆ ಎಂದು ಹೇಳಿದ್ದಾರೆ.



Related posts

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಸದಸ್ಯ ಪ್ರವೀಣ್ ಪೂಜಾರಿ (50) ನಿಧನ: ಮಂಡಳಿಯಿಂದ ತೀವ್ರ ಸಂತಾಪ

Mumbai News Desk

ನಿಟ್ಟೆ ತೇಜಮ್ಮ ಪೂಜಾರಿ ನಿಧಾನ

Mumbai News Desk

ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ ಸರ್ಕಾರ – ಬಸ್ ಪ್ರಯಾಣ ದರ ಶೇಕಡ 15ರಷ್ಟು ಏರಿಕೆ

Mumbai News Desk

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

Mumbai News Desk