ಪುಣೆ: ಕುಲಾಲ ಸಂಘ, ಮುಂಬೈ, ಬಹುಕೋಟಿ ವೆಚ್ಚದಲ್ಲಿ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಸಮೀಪದಲ್ಲಿ ನಿರ್ಮಿಸಿರುವ ಕುಲಾಲ ಭವನಕ್ಕೆ ಪುಣೆಯ ಉದ್ಯಮಿ, ಕುಲಾಲ ಸಮಾಜದ ಹಿರಿಯ ನಾಯಕರಾದ ಮತ್ತು ಎಸ್. ಬಂಜನ್ ಅಂಡ್ ಕಂಪನಿಯ ಆಡಳಿತ ನಿರ್ದೇಶಕರಾದ ಎಸ್. ಆರ್. ಬಂಜನ್ ಅವರು ₹20 ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡಿದ್ದಾರೆ.
ನವೆಂಬರ್ 23 ರಂದು ಲೋಕಾರ್ಪಣೆಗೊಳ್ಳಲಿರುವ ಕುಲಾಲ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಎಸ್. ಆರ್. ಬಂಜನ್ ಅವರನ್ನು ಸಂಘದ ಅಧ್ಯಕ್ಷರಾದ ರಘು ಮೂಲ್ಯ, ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷರಾದ ಗಿರೀಶ್ ಬಿ. ಸಾಲಿಯಾನ್, ಉಪಕಾರ್ಯಾಧ್ಯಕ್ಷರಾದ ಸುನಿಲ್ ಸಾಲಿಯಾನ್ ಮತ್ತು ಕಾರ್ಯದರ್ಶಿ ಉಮೇಶ್ ಬಂಗೇರ ಅವರು ಪುಣೆಯಲ್ಲಿ ಭೇಟಿಯಾಗಿ ಆಮಂತ್ರಿಸಿದರು.
ಕಾರ್ಯಕ್ರಮಕ್ಕೆ ಪರಿವಾರ ಸಮೇತ ಸೇರಿಕೊಳ್ಳುವುದಾಗಿ ತಿಳಿಸಿದ ಎಸ್. ಆರ್. ಬಂಜನ್ ಅವರು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಮತ್ತು ದೇಶ-ವಿದೇಶಗಳಿಂದ ಕುಲಾಲ ಬಾಂಧವರು ಇದರಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.




