30.5 C
Mumbai
June 8, 2026
Mumbai News Kannada
ಸುದ್ದಿ

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು





ಕುಂಬಳೆಯ ಡಿವೈಎಫ್ಐ ಪ್ರ‌ಮುಖ ನಾಯಕಿ, ಮಹಿಳಾ ಅಸೋಸಿಯೇಷನ್ ಏರಿಯಾ ಸಮಿತಿ ಅಧ್ಯಕ್ಷೆ, ಖ್ಯಾತ ಯುವ ನ್ಯಾಯವಾದಿ ಕುಂಬಳೆ ನಿವಾಸಿ ರಂಜಿತಾ (34) ಮೃತಪಟ್ಟಿದ್ದಾರೆ.
ಡಿವೈಎಫ್ಐ ಬ್ಲಾಕ್ ಘಟಕ ಖಜಾಂಜಿ ಮತ್ತು ವನಿತಾ ಸೇವಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿದ್ದ ಅವರು ಕುಂಬಳೆ ಪ್ರದೇಶದಿಂದ ಸಿಪಿಐ ಎಂ ನ ಸಮರ್ಥ, ಪ್ರಗಲ್ಭ ನಾಯಕಿಯಾಗಿ ಬೆಳೆದು ಬರುತಿದ್ದರು. ಮೃತದೇಹದ ಬಳಿಯಿಂದ ಚೀಟಿ ದೊರೆತಿದ್ದು ತನ್ನ ವೈಯ್ಯಕ್ತಿಕ ಕಾರಣ ಆತ್ಮಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ .
ಪಕ್ಷದ ಸಂಘಟನಾ ಕಾರ್ಯಕ್ರಮ, ಸಭೆ ನಿಮಿತ್ತ ನಿನ್ನೆ ಸಂಜೆ 5ರ ತನಕವೂ ಕಾರ್ಯಕರ್ತರನ್ನು ಸಂಪರ್ಕಿಸಿ ಲವಲವಿಕೆಯಿಂದ ಮಾತಾಡಿದ್ದ ಅವರು ದಿಢೀರನೆ ಆತ್ಮಹತ್ಯೆ ಮಾಡಿರುವುದು ಪಕ್ಷ ಸಂಘಟನಾ ಕಾರ್ಯಕರ್ತರನ್ನು ನಿಬ್ಬೆರಗಾಗಿಸಿದೆ. ಇವರ ಸಹೋದರ ಸಕ್ರಿಯ ಸಿಪಿಐ ಎಂ ಕಾರ್ಯಕರ್ತ, ರಿಕ್ಷಾ ಚಾಲಕ ಅಜಿತ್ ನಾಲ್ಕೈದು ವರ್ಷದ ಹಿಂದೆ ಕಡಸಲದಲ್ಲಿ ಸಂಬಂಧಿಯೊಬ್ಬರ ಮದುವೆಗೆ ಹೋದವರು ಪಕ್ಕದ ನೇತ್ರಾವತಿ ನದಿಯಲ್ಲಿ ಈಜುತ್ತಿದ್ದಾಗ ಮುಳುಗಿದ ಮಿತ್ರನನ್ನು ರಕ್ಷಿಸುವ ವಿಫಲ ಯತ್ನದಲ್ಲಿ ಮುಳುಗಿ ಮೃತಪಟ್ಟಿದ್ದರು. ರಂಜಿತಾ ಕುಂಬಳೆಯ ಚಂದ್ರಕಾರ್ನವರ ಪುತ್ರಿ ಹಾಗೂ ಸುಜಿತ್ ಬೆಳ್ಚಪ್ಪಾಡರ ಸಹೋದರಿ ಆಗಿರುತ್ತಾಳೆ.



Related posts

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk

ಸರ್ ಜೆ ಜೆ ಆಸ್ಪತ್ರೆಯಲ್ಲಿ ನೂತನ ಅತ್ಯಾಧುನಿಕ ಹೆರಿಗೆ ವಾರ್ಡ್ ಲೋಕಾರ್ಪಣೆ

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk

ಆಧುನಿಕ ವಿದ್ಯೆಗಿಂತ ಆಧ್ಯಾತ್ಮಿಕ ವಿದ್ಯೆ ಅಧಿಕ: ಶ್ರೀ ಪುತ್ತಿಗೆ ಶ್ರೀಗಳು

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಡಿ ಕೆ ಶೆಟ್ಟಿ ಆಯ್ಕೆ

Mumbai News Desk