July 23, 2026
Mumbai News Kannada
ಸುದ್ದಿ

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು







ಕುಂಬಳೆಯ ಡಿವೈಎಫ್ಐ ಪ್ರ‌ಮುಖ ನಾಯಕಿ, ಮಹಿಳಾ ಅಸೋಸಿಯೇಷನ್ ಏರಿಯಾ ಸಮಿತಿ ಅಧ್ಯಕ್ಷೆ, ಖ್ಯಾತ ಯುವ ನ್ಯಾಯವಾದಿ ಕುಂಬಳೆ ನಿವಾಸಿ ರಂಜಿತಾ (34) ಮೃತಪಟ್ಟಿದ್ದಾರೆ.
ಡಿವೈಎಫ್ಐ ಬ್ಲಾಕ್ ಘಟಕ ಖಜಾಂಜಿ ಮತ್ತು ವನಿತಾ ಸೇವಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿದ್ದ ಅವರು ಕುಂಬಳೆ ಪ್ರದೇಶದಿಂದ ಸಿಪಿಐ ಎಂ ನ ಸಮರ್ಥ, ಪ್ರಗಲ್ಭ ನಾಯಕಿಯಾಗಿ ಬೆಳೆದು ಬರುತಿದ್ದರು. ಮೃತದೇಹದ ಬಳಿಯಿಂದ ಚೀಟಿ ದೊರೆತಿದ್ದು ತನ್ನ ವೈಯ್ಯಕ್ತಿಕ ಕಾರಣ ಆತ್ಮಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ .
ಪಕ್ಷದ ಸಂಘಟನಾ ಕಾರ್ಯಕ್ರಮ, ಸಭೆ ನಿಮಿತ್ತ ನಿನ್ನೆ ಸಂಜೆ 5ರ ತನಕವೂ ಕಾರ್ಯಕರ್ತರನ್ನು ಸಂಪರ್ಕಿಸಿ ಲವಲವಿಕೆಯಿಂದ ಮಾತಾಡಿದ್ದ ಅವರು ದಿಢೀರನೆ ಆತ್ಮಹತ್ಯೆ ಮಾಡಿರುವುದು ಪಕ್ಷ ಸಂಘಟನಾ ಕಾರ್ಯಕರ್ತರನ್ನು ನಿಬ್ಬೆರಗಾಗಿಸಿದೆ. ಇವರ ಸಹೋದರ ಸಕ್ರಿಯ ಸಿಪಿಐ ಎಂ ಕಾರ್ಯಕರ್ತ, ರಿಕ್ಷಾ ಚಾಲಕ ಅಜಿತ್ ನಾಲ್ಕೈದು ವರ್ಷದ ಹಿಂದೆ ಕಡಸಲದಲ್ಲಿ ಸಂಬಂಧಿಯೊಬ್ಬರ ಮದುವೆಗೆ ಹೋದವರು ಪಕ್ಕದ ನೇತ್ರಾವತಿ ನದಿಯಲ್ಲಿ ಈಜುತ್ತಿದ್ದಾಗ ಮುಳುಗಿದ ಮಿತ್ರನನ್ನು ರಕ್ಷಿಸುವ ವಿಫಲ ಯತ್ನದಲ್ಲಿ ಮುಳುಗಿ ಮೃತಪಟ್ಟಿದ್ದರು. ರಂಜಿತಾ ಕುಂಬಳೆಯ ಚಂದ್ರಕಾರ್ನವರ ಪುತ್ರಿ ಹಾಗೂ ಸುಜಿತ್ ಬೆಳ್ಚಪ್ಪಾಡರ ಸಹೋದರಿ ಆಗಿರುತ್ತಾಳೆ.



Related posts

*ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಹರಿಶ್ಚಂದ್ರ ಹೆಜಮಾಡಿ ಇನ್ನಿಲ್ಲ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (14/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk