32 C
Mumbai
April 24, 2026
Mumbai News Kannada
ಸುದ್ದಿ

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು





ಕುಂಬಳೆಯ ಡಿವೈಎಫ್ಐ ಪ್ರ‌ಮುಖ ನಾಯಕಿ, ಮಹಿಳಾ ಅಸೋಸಿಯೇಷನ್ ಏರಿಯಾ ಸಮಿತಿ ಅಧ್ಯಕ್ಷೆ, ಖ್ಯಾತ ಯುವ ನ್ಯಾಯವಾದಿ ಕುಂಬಳೆ ನಿವಾಸಿ ರಂಜಿತಾ (34) ಮೃತಪಟ್ಟಿದ್ದಾರೆ.
ಡಿವೈಎಫ್ಐ ಬ್ಲಾಕ್ ಘಟಕ ಖಜಾಂಜಿ ಮತ್ತು ವನಿತಾ ಸೇವಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿದ್ದ ಅವರು ಕುಂಬಳೆ ಪ್ರದೇಶದಿಂದ ಸಿಪಿಐ ಎಂ ನ ಸಮರ್ಥ, ಪ್ರಗಲ್ಭ ನಾಯಕಿಯಾಗಿ ಬೆಳೆದು ಬರುತಿದ್ದರು. ಮೃತದೇಹದ ಬಳಿಯಿಂದ ಚೀಟಿ ದೊರೆತಿದ್ದು ತನ್ನ ವೈಯ್ಯಕ್ತಿಕ ಕಾರಣ ಆತ್ಮಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ .
ಪಕ್ಷದ ಸಂಘಟನಾ ಕಾರ್ಯಕ್ರಮ, ಸಭೆ ನಿಮಿತ್ತ ನಿನ್ನೆ ಸಂಜೆ 5ರ ತನಕವೂ ಕಾರ್ಯಕರ್ತರನ್ನು ಸಂಪರ್ಕಿಸಿ ಲವಲವಿಕೆಯಿಂದ ಮಾತಾಡಿದ್ದ ಅವರು ದಿಢೀರನೆ ಆತ್ಮಹತ್ಯೆ ಮಾಡಿರುವುದು ಪಕ್ಷ ಸಂಘಟನಾ ಕಾರ್ಯಕರ್ತರನ್ನು ನಿಬ್ಬೆರಗಾಗಿಸಿದೆ. ಇವರ ಸಹೋದರ ಸಕ್ರಿಯ ಸಿಪಿಐ ಎಂ ಕಾರ್ಯಕರ್ತ, ರಿಕ್ಷಾ ಚಾಲಕ ಅಜಿತ್ ನಾಲ್ಕೈದು ವರ್ಷದ ಹಿಂದೆ ಕಡಸಲದಲ್ಲಿ ಸಂಬಂಧಿಯೊಬ್ಬರ ಮದುವೆಗೆ ಹೋದವರು ಪಕ್ಕದ ನೇತ್ರಾವತಿ ನದಿಯಲ್ಲಿ ಈಜುತ್ತಿದ್ದಾಗ ಮುಳುಗಿದ ಮಿತ್ರನನ್ನು ರಕ್ಷಿಸುವ ವಿಫಲ ಯತ್ನದಲ್ಲಿ ಮುಳುಗಿ ಮೃತಪಟ್ಟಿದ್ದರು. ರಂಜಿತಾ ಕುಂಬಳೆಯ ಚಂದ್ರಕಾರ್ನವರ ಪುತ್ರಿ ಹಾಗೂ ಸುಜಿತ್ ಬೆಳ್ಚಪ್ಪಾಡರ ಸಹೋದರಿ ಆಗಿರುತ್ತಾಳೆ.



Related posts

ಅನಿತಾ ಪಿ. ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ

Mumbai News Desk

ಮುಂಬೈ : ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk

ನವೀನ್ ಡಿ. ಪಡೀಲ್‌ಗೆ 2025ರ ರಂಗಚಾವಡಿ ಪ್ರಶಸ್ತಿ: ನ. 9ರಂದು ಸುರತ್ಕಲ್‌ನಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮ

Mumbai News Desk

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk