28.4 C
Mumbai
March 7, 2026
Mumbai News Kannada
ಮುಂಬಯಿ

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆವಿದ್ಯಾರ್ಥಿ ಸಂಘದ ಮಹಾಸಭೆ





ಹಳೆ ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ಸದಸ್ಯರಾಗಬೇಕು: ವಾಸುದೇವ ಸಾಲಿಯಾನ್

ಮುಂಬಯಿ, ಅಕ್ಟೋಬರ್ 6: ವಿಜಯ ಕಾಲೇಜು ಮೂಲ್ಕಿ ಇದರ ಜಾಗತಿಕ ಹಳೆ ವಿದ್ಯಾರ್ಥಿ ಸಂಘ, ಮುಂಬಯಿ ಇದರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ ೨೯ರಂದು ಗೊರೆಗಾಂವ್ ಪೂರ್ವದಲ್ಲಿರುವ ನೆಸ್ಕೋದಲ್ಲಿರುವ ಬೈರೌಟ್ ಹೋಟೆಲ್‌ನಲ್ಲಿ ನಡೆಯಿತು.

​ಸಭೆಯಲ್ಲಿ ಹಿಂದಿನ ವರ್ಷದ ವರದಿಯನ್ನು ಉಪಾಧ್ಯಕ್ಷರಾದ ಅಡ್ವೋಕೇಟ್ ಶೇಖರ್ ಭಂಡಾರಿ ಅವರು ಮಂಡಿಸಿ, ಅನುಮೋದನೆಯನ್ನು ಪಡೆಯಲಾಯಿತು.

​ಲೆಕ್ಕಪತ್ರವನ್ನು ಖಜಾಂಚಿ ಸಿ.ಎ. ರೋಹಿತಾಕ್ಷ ದೇವಾಡಿಗ ಅವರು ವಾಚಿಸಿದರು.

​ಸಂಘದ ಲೆಕ್ಕಪರಿಶೋಧಕರಾಗಿ, ೨೦೨೫-೨೬ನೇ ಸಾಲಿಗೆ ಮಹೇಶ್ ಖರಡ್ಕರ್ ಮತ್ತು ಕಂಪನಿ ಅವರನ್ನು ಪುನರಾಯ್ಕೆ ಮಾಡಲಾಯಿತು.

​ಅಧ್ಯಕ್ಷರಾದ ವಾಸುದೇವ ಸಾಲಿಯಾನ್ ಅವರು ಸಂಘದ ಚಟುವಟಿಕೆಗಳ ಕುರಿತು ಸದಸ್ಯರಿಗೆ ತಮ್ಮ ಅನಿಸಿಕೆಯನ್ನು ತಿಳಿಸಿದರು. ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಸ್ಥಾನಮಾನದಲ್ಲಿದ್ದು, ತಾವು ಕಲಿತ ಕಾಲೇಜನ್ನು ಸದಾ ನೆನಪಿಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯವಾಗಿದೆ. ಕಾಲೇಜಿನ ಅಭಿವೃದ್ಧಿಗಾಗಿ ಮತ್ತು ಮುಂದಿನ ದಿನಗಳಲ್ಲಿ ವಿದ್ಯಾಭ್ಯಾಸಕ್ಕಾಗಿ ಶ್ರಮಿಸುವ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಹಳೆ ವಿದ್ಯಾರ್ಥಿ ಸಂಘವು ಅಪಾರ ಸಹಕಾರ ನೀಡುತ್ತಿದೆ. ಎಲ್ಲ ಹಳೆ ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ಸದಸ್ಯರಾಗಿ ಋಣಮುಕ್ತರಾಗಬೇಕು ಎಂದು ಅವರು ಕರೆ ನೀಡಿದರು.

​ವಂದನಾರ್ಪಣೆಯೊಂದಿಗೆ ಸಭೆಯ ಕಾರ್ಯಕ್ರಮ ಮುಕ್ತಾಯವಾಯಿತು.



Related posts

ದಿ ಯಂಗ್ ಮೆನ್ಸ್ ಬೋವಿ ಅಸೋಸಿಯೇಶನ್‌ ಬದ್ಲಾಪುರದ ಮೋಯಾ ನಗರಿಯಲ್ಲಿ ಗಣ-ಹೋಮ, ಸಾಮೂಹಿಕ ಸತ್ಯನಾರಾಯಣ ಮಹಾಪೂಜೆ

Mumbai News Desk

ಫಲಿಮಾರು ಮಠದೀಶರಿಗೆ ವಿಶ್ವ ಬಂಟರ ಕಾರ್ಯಕ್ರಮದ ಆಮಂತ್ರಣ.

Mumbai News Desk

ಕರ್ನಾಟಕ ವಿಶ್ವಕರ್ಮ ಎಸೋಸಿಯೇಶನ್ ಮುಂಬಯಿ, ಭಕ್ತಿ, ಸಡಗರದಿಂದ ಜರಗಿದ ವಿಶ್ವಕರ್ಮ ಮಹೋತ್ಸವ.

Mumbai News Desk

ತ್ರಿಶಾ ಉದಯ ಶೆಟ್ಟಿ ಶೇಗೆ   80.00 %

Mumbai News Desk

ಶ್ರೀ ರಜಕ ಸಂಘ ಮುಂಬಯಿಯ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 15 ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ, ಸನ್ಮಾನ, ಸಮಾರೋಪ ಸಮಾರಂಭ .

Mumbai News Desk