32 C
Mumbai
April 24, 2026
Mumbai News Kannada
ಮುಂಬಯಿ

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮಹೇಶ್ ಶೆಟ್ಟಿ ತೆಳ್ಳಾರ್, ಎರ್ಮಳ್ ಹರೀಶ್ ಶೆಟ್ಟಿ ಭೇಟಿ: ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ





​ಮುಂಬಯಿ, ಅಕ್ಟೋಬರ್ 14: ಇತ್ತೀಚೆಗೆ ಜೋಗೇಶ್ವರಿ ಪೂರ್ವದಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಹಿಂದೂ ಪರವಾದಿ ಮಹೇಶ್ ಶೆಟ್ಟಿ ತೆಳ್ಳಾರ್, ಉತ್ತರ ಮುಂಬಯಿ ಬಿಜೆಪಿ ಉಪಾಧ್ಯಕ್ಷ ಎರ್ಮಳ್ ಹರೀಶ್ ಶೆಟ್ಟಿ ಹಾಗೂ ಬಂಟರ ಸಂಘದ ಮುಂಬಯಿಯ ಎಸ್.ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು, ಬಿಜೆಪಿಯ ಯುವ ನಾಯಕ ಸಚ್ಚಿದಾನಂದ ಶೆಟ್ಟಿ, ಮುನ್ನಲಾಗುತು ಮತ್ತು ಇತರರು ಭೇಟಿ ನೀಡಿದರು.

​ಅವರು ಸಂಸ್ಕೃತಿ ಅಮೀನ್ ಅವರ ತಂದೆ-ತಾಯಿಗೆ ಸಾಂತ್ವನ ಹೇಳಿ, ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ.

​ಶ್ರದ್ಧಾ ಬಿಲ್ಡರ್‌ನ ಮಾಲೀಕರ ಮೇಲೆ ಪೊಲೀಸರು ಯಾವುದೇ ಪ್ರಕರಣ ದಾಖಲಿಸದೆ ಮೀನಮೇಷ ಎಣಿಸುತ್ತಿರುವ ಬಗ್ಗೆ ಸಂಸ್ಕೃತಿ ಅಮೀನ್ ಅವರ ತಂದೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದಾರೆ.

​ಸಂಸ್ಕೃತಿ ಅಮೀನ್ ಅವರ ತಂದೆ-ತಾಯಿಗೆ ಸಾಂತ್ವನದ ಮಾತುಗಳನ್ನು ಹೇಳಿದ ರಾಜಕೀಯ ಮುಖಂಡರು, “ಸರ್ಕಾರಿ ಅಧಿಕಾರಿಗಳ ಮೂಲಕ ನಾವು ಇದರ ಬಗ್ಗೆ ನ್ಯಾಯಾಂಗ ತನಿಖೆ ಮಾಡಿಸಿ, ಸಂಬಂಧಪಟ್ಟ ಬಿಲ್ಡರ್ ಮಾಲೀಕರನ್ನು ಬಂಧಿಸಲು ನಮ್ಮಿಂದಾದಷ್ಟು ಪ್ರಯತ್ನ ಮಾಡುತ್ತೇವೆ. ಮುಂದೆ ಯಾವುದೇ ಸಂಕಷ್ಟದ ಸಂದರ್ಭದಲ್ಲಿ ನಮ್ಮ ಸಹಕಾರವಿರುತ್ತದೆ” ಎಂಬ ಆಶ್ವಾಸನೆಯನ್ನು ಕೊಟ್ಟಿದ್ದಾರೆ.

​ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ಅವರೊಂದಿಗೆ ಮೀರಾ-ಭಾಯಂದರ್ ಪರಿಸರದ ಅರುಣ್ ಶೆಟ್ಟಿ ಪಣಿಯೂರು ಹಾಗೂ ಇತರ ತುಳು-ಕನ್ನಡಿಗರು ಪಾಲ್ಗೊಂಡಿದ್ದರು.



Related posts

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಕಲಂಬೋಲಿ, ಆಟಿಡೋಂಜಿ ದಿನ

Mumbai News Desk

ಬೋಂಬೆ ಬಂಟ್ಸ್ ಎಸೋಸಿಯೇಶನ್‌ನ ಯುವ ವಿಭಾಗದಿಂದ ದಾಂಡಿಯಾ ನೈಟ್.

Mumbai News Desk

ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಪ್ರವೇಶ ದ್ವಾರದಲ್ಲಿ ವಾಲ್ ಅಫ್ ಹೇಪಿನೆಸ್ ಉದ್ಘಾಟನೆ.

Mumbai News Desk

ಬಂಟರ ಸಂಘದ  ಜೋಗೇಶ್ವರಿ-ದಹಿಸರ್ ಪ್ರಾದೇಶಿಕ  ಸಮಿತಿಯ ಯುವ ವಿಭಾಗದ ವತಿಯಿಂದ ವಿಹಾರ ಕೂಟ.

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಅನುಷಾ ಎ ಕರ್ಕೇರ ಉತ್ತೀರ್ಣ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಖುಷಿ ರವಿ ಶೆಟ್ಟಿ ಗೆ ಶೇ 83 ಅಂಕ.

Mumbai News Desk