30.9 C
Mumbai
June 8, 2026
Mumbai News Kannada
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ,ಬಗ್ವಾಡಿ ಹೋಬಳಿ ಮುಂಬಯಿ : ಸ್ನೇಹ ಸಮ್ಮಿಲನ.





 ನೂತನ ಅಧ್ಯಕ್ಷರಾದ ಸಂತೋಷ್ ಕೆ ಪುತ್ರನ್ ರಿಂದ ಸಂಘ, ಸಮಾಜದ ಅಭಿವೃದ್ಧಿಗೆ ಯೋಜನೆಗಳ ಘೋಷಣೆ.

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ), ಮುಂಬಯಿ ಇದರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅ.12ರಂದು ಥಾಣೆ ಘೋಡ್‌ಬಂದರ್ ನ ಹೋಟೆಲ್ ಸಿಲ್ವೆರಾಡರ್  ಬ್ಯಾಂಕ್ವೆಟ್ ಹಾಲ್  ನಲ್ಲಿ ಸಂಘದ ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್  ಅವರ ಉಪಸ್ಥಿತಿಯಲ್ಲಿ, ನೂತನ ಅಧ್ಯಕ್ಷರಾದ ಸಂತೋಷ್ ಕೃಷ್ಣ ಪುತ್ರನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗೌರವ ಪ್ರಧಾನ ಕಾರ್ಯದರ್ಶಿ ಗಣೇಶ್ ಮೆಂಡನ್ ಸ್ವಾಗತಿಸಿದರು. 

ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಅಕ್ಟೋಬರ್ 20ರಂದು 50 ವರ್ಷ ಪೂರ್ತಿಗೊಳ್ಳಲಿರುವ ನೂತನ ಅಧ್ಯಕ್ಷರಾದ ಸಂತೋಷ್ ಕೃಷ್ಣ ಪುತ್ರನ್ ಸಂಘದ ಜವಾಬ್ದಾರಿಯನ್ನು ಸಮರ್ಥ ರೀತಿಯಲ್ಲಿ ನಿರ್ವಹಿಸಿ ಸಮಾಜ ಬಾಂಧವರಿಗೆ ಮಹತ್ತರವಾದ ಯೋಜನೆಗಳು ಅವರಿಂದ ರೂಪುಗೊಳ್ಳಲಿ ಇಂದು ಶುಭ ಹಾರೈಸಿದರು.

ಈ ವಿಶೇಷ ಸಂದರ್ಭದಲ್ಲಿ ಸಂತೋಷ ಕೃಷ್ಣ ಪುತ್ರನ್ ಅವರ ಪತ್ನಿ ಸುಚಿತ್ರಾ ಪುತ್ರನ್ ಮತ್ತು ಪರಿವಾರದವರು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ 50ನೇ ವರ್ಷದ ಹುಟ್ಟುಹಬ್ಬದ ಆಚರಣೆಯ ಸಂಕೇತಿಕವಾಗಿ ಕೇಕ್ ಕತ್ತರಿಸಿ ಮಾತನಾಡಿದ ಸಂತೋಷ್ ಪುತ್ರನ್ ಒಗ್ಗಟ್ಟಿನಿಂದ  ನಾವೆಲ್ಲರೂ ಸಂಘವನ್ನು ಬಲಿಷ್ಠ ಗೊಳಿಸೋಣ ತಮಗೆಲ್ಲರಿಗೂ ಮಾರ್ಗದರ್ಶಕರಾಗಿರುವ ಡಾ. ಜಿ ಶಂಕರ್ ಮತ್ತು ಹಿರಿಯರ ಮಾರ್ಗದರ್ಶನದಲ್ಲಿ ಸಂಘವನ್ನು ಸಮಾಜವನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸುವ. ಎಲ್ಲಾ ಪದಾಧಿಕಾರಿಗಳು ಸದಸ್ಯರು ಸಹಕಾರ ನೀಡಬೇಕು ಎಂದು ಮೊಗವೀರ ಮಹಾಜನ ಸೇವಾ ಸಂಘದ ಮುಂದಿನ ಮೂರು ವರ್ಷಗಳ ಕಾಲ ಸರಿಯಾದ ಮಾರ್ಗಸೂಚಿಯ  ತನ್ನ ಯೋಜನೆಗಳಾದ ಮಹಿಳಾ ಸಬಲೀಕರಣ, ವಿದ್ಯಾರ್ಥಿಗಳ ವೃತ್ತಿ ಮಾರ್ಗದರ್ಶನ, ಯುವಕರಿಗೆ ಉದ್ಯಮಶೀಲತೆ, ನಿಯಮಿತ ವಿಚಾರ ಸಂಕಿರಣಗಳು, ಕಾರ್ಯಾಗಾರಗಳು, ಸದಸ್ಯತ್ವಕ್ಕಾಗಿ ಸಮಾಲೋಚನಾ ಕಾರ್ಯಕ್ರಮಗಳು, ಆನ್‌ಲೈನ್ ಸದಸ್ಯತ್ವ ನೋಂದಣಿ, ಆರೋಗ್ಯ ಕಾರ್ಯಕ್ರಮ , ವಿಮೆ , ಸರ್ಕಾರಿ ಯೋಜನೆಗಳ ದಾಖಲಾತಿ, ಕೌಶಲ್ಯ ಅಭಿವೃದ್ಧಿ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಕಾರ್ಯಕ್ರಮ,ಸಂಘದ ವೆಬ್‌ಸೈಟ್ ಹಾಗೂ
 ಯುವ ವಿಭಾಗ ರೂಪಗೊಳ್ಳುವ ಬಗ್ಗೆ ತಿಳಿಸಿದರು.

ಗೌರವ ಕೋಶಾಧಿಕಾರಿ ನಾಗರಾಜ್ ಶ್ರೀಯಾನ್, ಉಪಾಧ್ಯಕ್ಷ ಮಹಾಬಲ ಕುಂದರ್, ಜೊತೆ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ನಾಯ್ಕ್ ಮತ್ತು ಅಶೋಕ್ ಮೆಂಡನ್,
ಜೊತೆ ಕೋಶಾಧಿಕಾರಿ ಪ್ರವೀಣ್ ನಾಯ್ಕ್,
ಕಾಂಚಿನೀ ಕಲಾಕೇಂದ್ರ ಹಾಗೂ ವಾಗ್ವರ್ಧಿನಿ ಸಭಾ ಕಾರ್ಯದರ್ಶಿ ಭಾಸ್ಕರ್ ಶ್ರೀಯಾನ್,
ಕ್ರೀಡಾ ಸಮಿತಿಯ ಕಾರ್ಯದರ್ಶಿಗಳಾದ ರಘುರಾಮ್ ಮೆಂಡನ್ ಮತ್ತು ಸುನಿಲ್ ಕುಂದರ್,
ಸೇವಾ ದಳದ ದಳಪತಿ ದಿನೇಶ್ ಮೊಗವೀರ,
ಹಾಗೂ ಆಡಳಿತ ಸಮಿತಿಯ ಸದಸ್ಯರುಗಳಾದ ರಾಜೇಂದ್ರ ಚಂದನ್, ಸುರೇಶ್ ತೋಳಾರ್, ಎನ್‌.ಎಚ್‌. ಬಗ್ವಾಡಿ, ರಾಘವೇಂದ್ರ ಮೊಗವೀರ, ಮಾದವ್ ಸುವರ್ಣ, ಉಮೇಶ್ ಮೊಗವೀರ, ಉದಯಕುಮಾರ್ ಪುತ್ರನ್, ರಾಘವೇಂದ್ರ ಚಂದನ್, ರಾಜೀವ್ ನಾಯ್ಕ್, ಮಂಜುನಾಥ ನಾಯ್ಕ್, ಮತ್ತು ಸತೀಶ್ ಶ್ರೀಯಾನ್ ಮತ್ತಿತರರು ಉಪಸ್ಥರಿದ್ದರು.

ಸಂತೋಷ್ ಕೃಷ್ಣ ಪುತ್ರನ್ ಅವರನ್ನು ಸಂಘದ ಗೌರವಾಧ್ಯಕ್ಷ ಸುರೇಶ್ ಕಾಂಚನ್, ಮಾಜಿ ಅಧ್ಯಕ್ಷರುಗಳಾದ ಗೋಪಾಲ್ ಪುತ್ರನ್, ಮಹಾಬಲ ಕುಂದರ್, ರಾಜು ಮೆಂಡನ್ ವಂಡ್ಸೆ, ಮತ್ತಿತರ ಮೊಗವೀರ ಮುಖಂಡರು ಅಭಿನಂದಿಸಿದರು.



Related posts

ಮುಂಬೈ ನಿವಾಸಿಗಳಿಗೆ ಗುಡ್ ನ್ಯೂಸ್: 2016 ಕ್ಕಿಂತ ಹಳೆಯ ಕಟ್ಟಡಗಳಿಗೆ ‘OC’ ನೀಡಲು ಮಹಾನಗರ ಪಾಲಿಕೆ ನಿರ್ಧಾರ

Mumbai News Desk

ಸಾರಸ್ವತ ವೈದಿಕ ಸೇವಾ ಪ್ರತಿಷ್ಟಾನ: ದ್ವಿತೀಯ ವಾರ್ಷಿಕ ಕಾರ್ಯಕ್ರಮ ಸಂಪನ್ನ .

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ,

Mumbai News Desk

ಶ್ರೀ ರಜಕ ಸಂಘ ಮುಂಬಯಿ ಇದರ ಮಹಿಳಾ ವಿಭಾಗ ದಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk