September 6, 2026
Mumbai News Kannada
ತುಳುನಾಡು

ಕನ್ನಡ ಕಿರುತೆರೆ ನಟಿ, ‘ಬಿಗ್ ಬಾಸ್’ ಖ್ಯಾತಿಯ ಕಾವ್ಯ ಶಾಸ್ತ್ರೀ ಅವರಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಿಗೆ ವಿಶೇಷ ಪೂಜೆ: ನವದುರ್ಗಾ ಲೇಖನ ಸಮರ್ಪಣೆ





ಚಿತ್ರ ಮಾಹಿತಿ: ವಿಕ್ಕಿ ಪೂಜಾರಿ ಮಡುಂಬು

​ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ‘ಬಿಗ್ ಬಾಸ್’ ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಕಾವ್ಯ ಶಾಸ್ತ್ರೀ ಅವರು ಇತ್ತೀಚೆಗೆ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು. ಅವರು ಇಲ್ಲಿ ನೆಲೆಸಿರುವ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದಿವ್ಯ ದರುಶನ ಪಡೆದು, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

​ದೇಗುಲಕ್ಕೆ ಆಗಮಿಸಿದ ನಟಿಯನ್ನು ದೇವಳದ ಪ್ರಧಾನ ಅರ್ಚಕರೂ, ವೇದಮೂರ್ತಿಗಳೂ ಆದ ಶ್ರೀನಿವಾಸ ತಂತ್ರಿ ಅವರು ಭಕ್ತಿಪೂರ್ವಕವಾಗಿ ಸ್ವಾಗತಿಸಿ, ವಿಶೇಷ ಪೂಜಾ ವಿಧಿಗಳನ್ನು ನೆರವೇರಿಸಿದರು. ನಂತರ ದೇವಿಯ ಅನುಗ್ರಹ ಪ್ರಸಾದವನ್ನು ಕಾವ್ಯ ಶಾಸ್ತ್ರೀ ಅವರಿಗೆ ನೀಡಿ ಆಶೀರ್ವದಿಸಿದರು.

​ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಕಾವ್ಯ ಶಾಸ್ತ್ರೀ ಅವರಿಗೆ ಗೌರವಾರ್ಪಣೆ ಮಾಡಿ ಸನ್ಮಾನಿಸಲಾಯಿತು.

​ವಿಶೇಷವಾಗಿ, ಕಾವ್ಯ ಶಾಸ್ತ್ರೀ ಅವರು ತಮ್ಮ ತಂದೆ-ತಾಯಿಯವರೊಂದಿಗೆ ದೇವಳದ ಆವರಣದಲ್ಲಿರುವ ನವದುರ್ಗಾ ಲೇಖನ ಮಂಟಪದಲ್ಲಿ ನವದುರ್ಗೆಯರ ಲೇಖನವನ್ನು ಬರೆದು, ದೇವಿಯ ಚರಣಗಳಿಗೆ ಶಾಶ್ವತ ಸೇವೆಯನ್ನು ಸಮರ್ಪಿಸಿದರು. ಇದು ಅವರ ದೈವಭಕ್ತಿ ಮತ್ತು ಧಾರ್ಮಿಕ ಶ್ರದ್ಧೆಗೆ ಸಾಕ್ಷಿಯಾಯಿತು.

​ಈ ಶುಭ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರು ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷರೂ ಆದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ನವದುರ್ಗಾ ಲೇಖನ ಯಜ್ಞದ ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ಬೆಂಗಳೂರು ಸಮಿತಿಯ ಸದಸ್ಯರಾದ ಗಿರೀಶ್ ಪೂಜಾರಿ ಮತ್ತು ರಾಜಣ್ಣ ಬೆಂಗಳೂರು ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಕಾವ್ಯ ಶಾಸ್ತ್ರೀ ಅವರ ಈ ಭೇಟಿಯು ಕಾಪುವಿನ ಧಾರ್ಮಿಕ ವಾತಾವರಣಕ್ಕೆ ಮತ್ತಷ್ಟು ಶೋಭೆ ತಂದಿತು.



Related posts

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಅಕ್ಷತಾ ಪೂಜಾರಿ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

Mumbai News Desk

ಉಡುಪಿ ಕಂಬಳ ಶಂಕುಸ್ಥಾಪನೆ: ನಿಷೇಧಾಜ್ಞೆ ಉಲ್ಲಂಘಿಸಿದ ಸಂಸದರು, ಶಾಸಕರು ಸೇರಿ 37 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

Mumbai News Desk

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ಮತ್ತು ರಂಗಚಾವಡಿ ರಜತ ಸಂಭ್ರಮ: ನವೀನ್ ಡಿ. ಪಡೀಲ್ ಅವರಿಗೆ ‘ರಂಗಚಾವಡಿ ಪ್ರಶಸ್ತಿ’ ಪ್ರದಾನ

Mumbai News Desk