.
ಮಹಾರಾಷ್ಟ್ರ ಸರ್ಕಾರದ ಪ್ರಮುಖ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಕನ್ನಡಿಗ, ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರನ್ನು ಮಹಾರಾಷ್ಟ್ರ ಸರ್ಕಾರವು ಮಹತ್ವದ ‘ಹೆಚ್ಚುವರಿ ಮುಖ್ಯ ಕಾರ್ಯದರ್ಶಿ’ ಹುದ್ದೆಗೆ ಬಡ್ತಿ ನೀಡಿ ನೇಮಕ ಮಾಡಿದೆ.
ಈ ಸಂದರ್ಭದಲ್ಲಿ ಡಾ. ಗೋವಿಂದರಾಜ್ (ಐಎಎಸ್) ಅವರನ್ನು ಮುಂಬೈ ಒಕ್ಕಲಿಗರ ಸಂಘ ಮಹಾರಾಷ್ಟ್ರದ ವತಿಯಿಂದ ಗೌರವಿಸಲಾಯಿತು. ಸಂಘದ ಸ್ಥಾಪಕರು, ಮಾಜಿ ಕರ್ನಾಟಕ ಸಚಿವರಾದ ಡಾ. ಕೆ. ಸಿ. ನಾರಾಯಣಗೌಡ, ಅಧ್ಯಕ್ಷರಾದ ಕೆ. ರಾಜೇಗೌಡ, ಮಾಜಿ ಅಧ್ಯಕ್ಷರಾದ ಜಿತೇಂದ್ರ ಗೌಡ ಹಾಗೂ ಗೌರವ ಪ್ರಧಾನ ಕಾರ್ಯದರ್ಶಿಯಾದ ಗಂಗಾಧರ್ ಗೌಡ ಅವರು ಶಾಲು ಹೊದಿಸಿ, ಪುಷ್ಪ ಗೌರವ ನೀಡಿ ಅಭಿನಂದಿಸಿ, ಸನ್ಮಾನಿಸಿದರು.
.
.
.




