27.7 C
Mumbai
July 23, 2026
Mumbai News Kannada
ಪ್ರಕಟಣೆಸುದ್ದಿ

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ







ಮುಂಬಯಿ, ಅಕ್ಟೋಬರ್ 23: ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ), ಕೊಪ್ಪಳ ವತಿಯಿಂದ ಅಕ್ಟೋಬರ್ 26ರಂದು ‘ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವ’ ನಡೆಯಲಿದೆ. ಕೊಪ್ಪಳದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಪೂರ್ವಾಹ್ನ 10.15ಕ್ಕೆ ಆರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರಾದ ಅರವಿಂದ ಚೊಕ್ಕಾಡಿ ಹಾಗೂ ಚಿಂತಕರು, ಮಾಜಿ ಶಾಸಕರಾದ ವೈ.ಎಸ್.ವಿ. ದತ್ತ ಅವರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲಿದ್ದಾರೆ.

​ಈ ಕಾರ್ಯಕ್ರಮದಲ್ಲಿ ಮುಂಬಯಿಯ ಕವಯಿತ್ರಿ ಅನಿತಾ ಪಿ. ತಾಕೊಡೆಯವರಿಗೆ 2025ನೆಯ ಸಾಲಿನ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಮತ್ತು ಪ್ರಶಸ್ತಿ ಪಡೆದ ಅವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಲೋಕಾರ್ಪಣೆಗೊಳ್ಳಲಿದೆ. ಅಂದು ದಿನವಿಡೀ ನಡೆಯಲಿರುವ ಈ ಸಮಾರಂಭದಲ್ಲಿ ಗೀತ ಗಾಯನ, ಕೃತಿಗಳ ಲೋಕಾರ್ಪಣೆ, 2025ನೆಯ ಸಾಲಿನ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪ್ರದಾನ, ಸಾಧಕರಿಗೆ ಗೌರವ ಹಾಗೂ ಸಾಹಿತ್ಯಕ ಚರ್ಚೆಗಳು ನಡೆಯಲಿವೆ. ಈ ಸಮಾರಂಭದಲ್ಲಿ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಚಾಲಕರಾದ ಮಹೇಶ್ ಬಳ್ಳಾರಿಯವರು ವಿನಂತಿಸಿಕೊಂಡಿದ್ದಾರೆ.

ಅನಿತಾ ಪಿ. ತಾಕೊಡೆ: ಸಾಹಿತ್ಯ ಸಾಧನೆ

​ಕವಿಯಾಗಿ, ಕಥೆಗಾರರಾಗಿ, ಅಂಕಣಕಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಮುನ್ನಡೆಯುತ್ತಿರುವ ಅನಿತಾ ಅವರು ಮುಂಬಯಿ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ‍್ಯಾಂಕ್‌ನೊಂದಿಗೆ ಪಡೆದು, ಎಂ.ಬಿ. ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇವರು 2019ರಲ್ಲಿ ಮೈಸೂರು ಅರಮನೆಯ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರ ಪಡೆದಿದ್ದಾರೆ. ಈಗಾಗಲೇ ಇವರ ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ.

​ಪಿಎಚ್.ಡಿ. ಕೋರ್ಸ್ ವರ್ಕ್‌ನ ಸಲುವಾಗಿ ಖ್ಯಾತ ಸಮಾಜ ಸೇವಕ ಜಯ ಸಿ. ಸುವರ್ಣರ ಕುರಿತು ಸಿದ್ಧಪಡಿಸಿದ ‘ಸುವರ್ಣಯುಗ’ ಶೋಧ ಪ್ರಬಂಧಕ್ಕೆ ಮುಂಬಯಿ ವಿಶ್ವವಿದ್ಯಾಲಯದ ವತಿಯಿಂದ ಸಂಶೋಧಕಿ ಡಾ. ಲೀಲಾ ಬಿ. ಅವರು ಕೊಡಮಾಡುವ ‘ಶೋಧಸಿರಿ’ ಪುರಸ್ಕಾರ, ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನದ ವತಿಯಿಂದ ವಿಕಾಸ ಪುಸ್ತಕ ಬಹುಮಾನ ಲಭಿಸಿದೆ. ಇವರ ‘ನಿವಾಳಿಸಿಬಿಟ್ಟ ಕೋಳಿ’ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ 2022ನೆಯ ಸಾಲಿನ ಕೆ. ವಾಸುದೇವಾಚಾರ್ಯ ದತ್ತಿ ಪ್ರಶಸ್ತಿ, ಮಾಣಿಕ್ಯ ಪ್ರಕಾಶನ, ಹಾಸನದಿಂದ ‘ಪದ್ಮಾವತಿ ವೆಂಕಟೇಶ ದತ್ತಿ ಪುರಸ್ಕಾರ’ ಲಭಿಸಿದೆ. ಇವರ ‘ಮೋಹನ ತರಂಗ’ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಗದು ಪುರಸ್ಕಾರ ಪ್ರಾಪ್ತವಾಗಿದೆ.

​”ಅಂತರಂಗದ ಮೃದಂಗ”ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ, ಮುಂಬಯಿ ವತಿಯಿಂದ “ಶ್ರೀಮತಿ ಸುಶೀಲಾ ಎಸ್. ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ” ಹಾಗೂ “ಜನಸ್ಪಂದನ ಟ್ರಸ್ಟ್ (ರಿ), ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ” ಕೊಡಮಾಡುವ “ಅಲ್ಲಮ ಸಾಹಿತ್ಯ ಪ್ರಶಸ್ತಿ” ಲಭಿಸಿದೆ. 2025ರಲ್ಲಿ ಚೆಂಬೂರು ಕರ್ನಾಟಕ ಸಂಘದ ವತಿಯಿಂದ ಅರಾಟೆ ನಾಗಮ್ಮ ಶೇಷಪ್ಪ ಪೂಜಾರಿ ಸ್ಮಾರಕ ಪ್ರಶಸ್ತಿಯೂ ಲಭಿಸಿದೆ. ಇವರ ಸಾಹಿತ್ಯ ಸಾಧನೆಗೆ ಹಲವಾರು ಪುರಸ್ಕಾರಗಳು ಲಭಿಸಿವೆ. ಇವರು ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ. ಜಿ.ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ. ಸಂಶೋಧನೆಯಲ್ಲಿ ನಿರತರಾಗಿದ್ದಾರೆ.



Related posts

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಜವಾಬ್ದಾರಿ: ಮಹಾತ್ಮ ಜ್ಯೋತಿರಾವ್ ಫುಲೆ 200ನೇ ಜನ್ಮ ದಿನಾಚರಣೆಯ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

ಏಪ್ರಿಲ್ 4ರಿಂದ ಕುರುಡುಂಜೆ ಗರಡಿಯಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಸಂಭ್ರಮ

Mumbai News Desk

ತೋನ್ಸೆ – ಹೂಡೆಯಲ್ಲಿ 10 ದಿನಗಳ ಉಚಿತ ‘ಫೂಟ್ ಪಲ್ಸ್ ಥೆರಪಿ’ ಆರೋಗ್ಯ ಶಿಬಿರ: ಜುಲೈ 22 ರಿಂದ ಚಾಲನೆ

Mumbai News Desk

ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ 64ನೇ ವಾರ್ಷಿಕೋತ್ಸವ: ಏ. 12ರಿಂದ ಧಾರ್ಮಿಕ ಸಂಭ್ರಮ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (18/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk