September 6, 2026
Mumbai News Kannada
ಸುದ್ದಿ

ಮಾತೃಭೂಮಿ  ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ. ಯಿಂದ ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರಿಗೆ ಅಭಿನಂದನೆ.





ಚಿತ್ರ ವರದಿ : ದಿನೇಶ್ ಕುಲಾಲ್

——————————

ಮುಂಬೈ: ಬಂಟರ ಸಂಘ ಮುಂಬೈ  ಯ ಸಂಚಾಲಿತ ಮಾತೃಭೂಮಿ  ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ನ ಗೌರವ  ಕಾರ್ಯದರ್ಶಿಯಗಿ ಕಾರ್ಯನಿರ್ವಹಿಸಿಕೊಂಡಿರುವ ಪ್ರವೀಣ್ ಬೋಜ ಶೆಟ್ಟಿ ಅವರು ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ  ಆಯ್ಕೆಗೊಂಡಿದ್ದು .ಅವರನ್ನು ನವಂಬರ್ 27ರಂದು ಕುರ್ಲಾ ಪೂರ್ವದ ಬಂಟರ ಭವನದ ಅನೆಕ್ಸ್ ಸಂಕಿರಣದಲ್ಲಿರುವಮಾತೃಭೂಮಿಯ ಕಚೇರಿಯಲ್ಲಿ ನಡೆದ  ಆಡಳಿತ ಸಭೆಯಲ್ಲಿ ಸೊಸೈಟಿ ಯ ಕಾರ್ಯಾಧ್ಯಕ್ಷರಾದ ಉಳ್ತೂರು ಮೋಹನದಾಸ್ ಶೆಟ್ಟಿ ಯವರು ಮತ್ತು ಆಡಳಿತ ಪದಾಧಿಕಾರಿಗಳು ಗೌರವಿಸಿದರು.

ಗೌರವವನ್ನು  ಸ್ವೀಕರಿಸಿದ ಪ್ರವೀಣ್ ಬೋಜ ಶೆಟ್ಟಿ ಕೃತಜ್ಞತೆ ಸಲ್ಲಿಸುತ್ತಾ ಅಧ್ಯಕ್ಷನಾಗಿ ಪ್ರಥಮ ಗೌರವ ಇದಾಗಿದೆ . ಈ ಗೌರವ ಮಾತೃಭೂಮಿ  ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಸಲ್ಲುತ್ತದೆ. ನನ್ನ ಮುಂದಿನ ಸೇವ ಕಾರ್ಯಗಳಿಗೆ ತಾವೆಲ್ಲರೂ ಸಹಕರಿಸಬೇಕು ಎಂದು ನುಡಿದರು.

ಸೊಸೈಟಿ ಯ ಕಾರ್ಯಾಧ್ಯಕ್ಷರಾದ ಉಳ್ತೂರು ಮೋಹನದಾಸ್ ಶೆಟ್ಟಿ ಯವರು ಪ್ರವೀಣ್ ಭೋಜ ಶೆಟ್ಟಿ ಅವರು ಮಾತೃಭೂಮಿಗೆ ನೀಡಿದ ಸೇವಾ ಕಾರ್ಯಗಳನ್ನು ನೆನಪಿಸಿಕೊಂಡು ಬಂಟರ ಸಂಘದ ಮೂಲಕ ಸಮಾಜದ ಉತ್ತಮ ಸೇವಾ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಉಪ ಕಾರ್ಯ ಧ್ಯಕ್ಷ ಡಾ. ಆರ್ ಕೆ ಶೆಟ್ಟಿ. ಕೋಶಧಿಕಾರಿ ಸಿ ಎ ಹರೀಶ್ ಡಿ ಶೆಟ್ಟಿ. ನಿರ್ದೇಶಕರುಗಳಾದ ಮಹೇಶ್ ಎಸ್ ಶೆಟ್ಟಿ .ಶಶಿಧರ್ ಕೆ ಶೆಟ್ಟಿ ಇನ್ನಂಜೆ .ಸಿಎ ಜಗದೀಶ್ ಬಿ ಶೆಟ್ಟಿ .ಕಿಶೋರ್ ಕುಮಾರ್ ಕುತ್ಯಾರ್. ಸುನಂದ ಡಿ ಶೆಟ್ಟಿ. ಸಿಎ ರಾಜಶ್ರೀ ಜಿ ಶೆಟ್ಟಿ. ಹಿರಿಯ ಪ್ರಬಂಧಕಿ ಮಲ್ಲಿಕಾ ಪಿ ಶೆಟ್ಟಿ. ಪ್ರಬಂಧಕಿ ಶಶಿಕಲಾ ಎಸ್ ಶೆಟ್ಟಿ .ಮ್ಯಾನೇಜರ್ ಅಡ್ಮಿನ್ ಮಹೇಂದ್ರ ಸಕ್ಪಾಲ್ ಹಾಗೂ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥರಿದ್ದರು



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk

ವಿಶ್ವನಾಥ ಯು. ಮಾಡಾ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಂತಾಪ

Mumbai News Desk

ನಾಸಿಕ್ ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ:

Mumbai News Desk

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ್ ಬ್ಯಾಂಕ್ ಸಾಧನೆ: ಇನ್ಫೋಸಿಸ್ ಫಿನಾಕಲ್ ಇನ್ನೋವೇಶನ್ ಅವಾರ್ಡ್ಸ್ 2026’

Mumbai News Desk