July 23, 2026
Mumbai News Kannada
ಸುದ್ದಿ

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ







 ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಂಧ್ರ ಪ್ರದೇಶದ ಕರ್ನೂಲ್​ ಚಿನ್ನಟೆಕೋರು ಗ್ರಾಮದ ಬಳಿ ಖಾಸಗಿ ಕಾವೇರಿ ಸ್ವೀಪರ್ ಬಸ್​ ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತಿತ್ತು. ಈ ವೇಳೆ ಏಕಾಏಕಿ ಬಸ್​ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದಿದೆ. ಇದರಿಂದ ಪ್ರಯಾಣಿಕರು ತಕ್ಷಣಕ್ಕೆ ಹೊರ ಬರಲು ಆಗಿಲ್ಲ. ಬಸ್​​ನಲ್ಲಿದ್ದ 42 ಪ್ರಯಾಣಿಕರ ಪೈಕಿ 20ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಇದರಲ್ಲಿ 15ಕ್ಕೂ ಅಧಿಕ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್​ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿದ್ದರಿಂದ ಪ್ರಯಾಣಿಕರು ಹೊರಬರಲು ಹರಸಾಹಸ‌ ಪಟ್ಟಿದ್ದಾರೆ. ಕೆಲವರು ಎಮರ್ಜೆನ್ಸಿ ಡೋರ್​ನಿಂದ ಹೊರ ಬಂದರೆ, ಇನ್ನು ಕೆಲವರು ಕಿಟಕಿಯ ಗ್ಲಾಸ್ ಒಡೆದು ಹೊರ ಬಂದಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನ ಕರ್ನೂಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​ಪಿ ವಿಕ್ರಾಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

.

.

.

.



Related posts

ಉಳ್ಳಾಲ ಬ್ರಹ್ಮಶ್ರೀ ಬಿಲ್ಲವ ವೇದಿಕೆಯಿಂದ ಸೂರ್ಯಕಾಂತ್ ಜಯ ಸುವರ್ಣ ರಿಗೆ” ಬ್ರಹ್ಮಶ್ರೀ “ಪ್ರಶಸ್ತಿ ಪ್ರದಾನ.

Mumbai News Desk

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk