31 C
Mumbai
March 6, 2026
Mumbai News Kannada
ಸುದ್ದಿ

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ





 ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಂಧ್ರ ಪ್ರದೇಶದ ಕರ್ನೂಲ್​ ಚಿನ್ನಟೆಕೋರು ಗ್ರಾಮದ ಬಳಿ ಖಾಸಗಿ ಕಾವೇರಿ ಸ್ವೀಪರ್ ಬಸ್​ ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತಿತ್ತು. ಈ ವೇಳೆ ಏಕಾಏಕಿ ಬಸ್​ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದಿದೆ. ಇದರಿಂದ ಪ್ರಯಾಣಿಕರು ತಕ್ಷಣಕ್ಕೆ ಹೊರ ಬರಲು ಆಗಿಲ್ಲ. ಬಸ್​​ನಲ್ಲಿದ್ದ 42 ಪ್ರಯಾಣಿಕರ ಪೈಕಿ 20ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಇದರಲ್ಲಿ 15ಕ್ಕೂ ಅಧಿಕ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್​ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿದ್ದರಿಂದ ಪ್ರಯಾಣಿಕರು ಹೊರಬರಲು ಹರಸಾಹಸ‌ ಪಟ್ಟಿದ್ದಾರೆ. ಕೆಲವರು ಎಮರ್ಜೆನ್ಸಿ ಡೋರ್​ನಿಂದ ಹೊರ ಬಂದರೆ, ಇನ್ನು ಕೆಲವರು ಕಿಟಕಿಯ ಗ್ಲಾಸ್ ಒಡೆದು ಹೊರ ಬಂದಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನ ಕರ್ನೂಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​ಪಿ ವಿಕ್ರಾಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

.

.

.

.



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk

ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಕುತ್ಯಾರು  ಶತ ಸಂವತ್ಸರೋತ್ಸವ

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.

Mumbai News Desk

ತೋಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಅಮೃತ ವರ್ಷಿಣಿ ” ಉದ್ಘಾಟನೆ

Mumbai News Desk