July 23, 2026
Mumbai News Kannada
ಸುದ್ದಿ

ನವಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ.







ಪ್ರಧಾನಿ ನರೇಂದ್ರ ಮೋದಿ 16 ವರ್ಷಗಳ ಬಳಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ದರ್ಶನ ಪಡೆದು, ಸಭಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ನವೆಂಬರ್‌ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠಕ್ಕೂ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ. ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತ ಪಾರಾಯಣ, ಗೀತೋತ್ಸವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಅಲ್ಲದೇ ಮಠದ ವ್ಯಾಪ್ತಿಯಲ್ಲಿ ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದು, ಭಕ್ತರು, ಸಾರ್ವಜನಿಕರ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಲಿದ್ದಾರೆ.

16 ವರ್ಷಗಳ ಹಿಂದೆ ಪುತ್ತಿಗೆ ಪರ್ಯಾಯ ಸಂದರ್ಭ ಉಡುಪಿಗೆ ಭೇಟಿ ನೀಡಿದ್ದ ನರೇಂದ್ರ ಮೋದಿ, ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ಕೊಡ್ತಿದ್ದಾರೆ.
ಗೀತಾ ಜಯಂತಿಅಂಗವಾಗಿ ನಡೆಯಲಿರುವ ” ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ” ಕಾರ್ಯಕ್ರಮದಲ್ಲಿಯೂ ಅವರು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿ ಕಚೇರಿ ಈ ಭೇಟಿಯನ್ನು ಖಚಿತಪಡಿಸಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.

.

.

.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (25/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk

ಪಶ್ಚಿಮ ಬಂಗಾಳ ವಿಧಾನಸಭಾ ವಿಸರ್ಜನೆ: ಮಮತಾ ಬ್ಯಾನರ್ಜಿ ರಾಜೀನಾಮೆ ನಿರಾಕರಣೆ ಹಾಗೂ ರಾಜ್ಯಪಾಲರ ಕಠಿಣ ಕ್ರಮ

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆ.

Mumbai News Desk

ರೈ ಸಮಿತಿ ಎಜುಕೇಷನಲ್ ಟ್ರಸ್ಟ್‌ನ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್‌ಗೆ ಕಟೀಲು ಅನಂತ ಅಸ್ರಣ್ಣರ ಭೇಟಿ

Mumbai News Desk