32 C
Mumbai
April 24, 2026
Mumbai News Kannada
ಸುದ್ದಿ

ನವಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ.





ಪ್ರಧಾನಿ ನರೇಂದ್ರ ಮೋದಿ 16 ವರ್ಷಗಳ ಬಳಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ದರ್ಶನ ಪಡೆದು, ಸಭಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ನವೆಂಬರ್‌ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠಕ್ಕೂ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ. ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತ ಪಾರಾಯಣ, ಗೀತೋತ್ಸವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಅಲ್ಲದೇ ಮಠದ ವ್ಯಾಪ್ತಿಯಲ್ಲಿ ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದು, ಭಕ್ತರು, ಸಾರ್ವಜನಿಕರ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಲಿದ್ದಾರೆ.

16 ವರ್ಷಗಳ ಹಿಂದೆ ಪುತ್ತಿಗೆ ಪರ್ಯಾಯ ಸಂದರ್ಭ ಉಡುಪಿಗೆ ಭೇಟಿ ನೀಡಿದ್ದ ನರೇಂದ್ರ ಮೋದಿ, ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ಕೊಡ್ತಿದ್ದಾರೆ.
ಗೀತಾ ಜಯಂತಿಅಂಗವಾಗಿ ನಡೆಯಲಿರುವ ” ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ” ಕಾರ್ಯಕ್ರಮದಲ್ಲಿಯೂ ಅವರು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿ ಕಚೇರಿ ಈ ಭೇಟಿಯನ್ನು ಖಚಿತಪಡಿಸಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.

.

.

.



Related posts

ಛತ್ರಪತಿ ಶಿವಾಜಿ ಮಹಾರಾಜರ ಭೂಮಿಯಲ್ಲಿ ಡ್ಯಾನ್ಸ್ ಬಾರ್‌ಗಳಿಗೆ ನಿಷೇಧ ಹೇರಿದ ರಾಜ್ ಠಾಕ್ರೆ ಹೇಳಿಕೆಯ ಬೆನ್ನಲ್ಲೆ ಪನ್ವೇಲ್ ಬಾರ್ ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು

Mumbai News Desk

ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.

Mumbai News Desk

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ

Mumbai News Desk