
ಪಡುಬಿದ್ರಿ ಸಾಗರ ವಿದ್ಯಾ ಮಂದಿರದಲ್ಲಿ ದಿ 1/11 /2025 ರ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಂಚಾಲಕರಾದ ಸುಕುಮಾರ ಸಿ ಶ್ರೀಯಾನ್ ಅವರು ಕನ್ನಡ ಪತಾಕೆಗೆ ಹಾಗೂ ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸುತ್ತಾ ,ಕನ್ನಡಿಗರಾದ ನಾವು ಕನ್ನಡ ಭಾಷೆಯ ಅಭಿಮಾನದ ಜೊತೆಗೆ ಎಲ್ಲಾ ಭಾಷೆಗಳನ್ನು ಗೌರವಿಸಬೇಕು ಎಂದು ತಿಳಿಸಿದರು.

ಎಂಟನೇ ತರಗತಿ ವಿದ್ಯಾರ್ಥಿನಿ ಆಧ್ಯ ಕನ್ನಡದ ಇತಿಹಾಸದ ಬಗ್ಗೆ ಸವಿವರವಾಗಿ ತಿಳಿಸಿದರು. ಶಾಲಾ ವಿದ್ಯಾರ್ಥಿಗಳ ಸಮೂಹ ನೃತ್ಯ ಹಾಗೂ ಸಮೂಹ ಗೀತೆಗಳು ಕನ್ನಡ ಸಂಸ್ಕೃತಿಯನ್ನು ಬಿಂಬಿಸುವಂತಿತ್ತು. ಶಾಲಾ ಮುಖ್ಯೋಪಾಧ್ಯಾಯನಿ ಪದ್ಮಶ್ರೀ ಸುರೇಶ್ ರಾವ್, ರಜತ ಮಹೋತ್ಸವ ಸಮಾರಂಭದ ಅಧ್ಯಕ್ಷರಾದ ಶಶಿಕಾಂತ್ ಪಡುಬಿದ್ರಿ ಆಡಳಿತ ಮಂಡಳಿಯ ಸದಸ್ಯರಾದ ಕೆ ಎನ್ ಚಂದ್ರಶೇಖರ್, ಲೋಕೇಶ್ ಕರ್ಕೆರ, ಪೋಷಕರು, ಶಿಕ್ಷಕರು ಶಿಕ್ಷಕೇತರವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿದರು, ಇಂಚರ ಆರ್ ರಾವ್ ಹಾಗೂ ಕನ್ನಡ ಶಿಕ್ಷಕಿ ಅಮಿತಾ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು. ಸ್ತುತಿ ಹೆಚ್ ಕುಂದರ್ ವಂದಿಸಿದರು. ವನದುರ್ಗ ಟ್ರಸ್ಟ್ ಪಡುಬಿದ್ರಿ ಇವರ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.





