32 C
Mumbai
March 7, 2026
Mumbai News Kannada
ಸುದ್ದಿ

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ





ಹೊಸ ಅಂಗಣ ಪ್ರಕಾಶನ ಮೂಲ್ಕಿ ಪ್ರಕಟಿತ, ಜಾನಪದ ಲೇಖಕ, ಸಂಘಟಕ ಹರಿಶ್ಚಂದ್ರ ಪಿ ಸಾಲ್ಯಾನ್ ಅವರ 21ನೇ ಕೃತಿ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭವು ನವಂಬರ್ 6ರಂದು ಗುರುವಾರ ಸಂಜೆ 4.30ಕ್ಕೆ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಜರಗಲಿದೆ.
ಮೂಲ್ಕಿ – ಮೂಡುಬಿದ್ರೆ ಕ್ಷೇತ್ರದ ಜನಪ್ರಿಯ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ನಾರಾಯಣ ಗುರು ನರ್ಸಿಂಗ್ ಹೋಮ್ ಮುಲ್ಕಿಯ ಡಾ. ರಂಜನಾ, ಕಲ್ಲಾಟೆ ದೈವಸ್ಥಾನದ ಗುತ್ತಿನಾರ್ ವಿಶುಕುಮಾರ್ ಶೆಟ್ಟಿ, ಶ್ರೀ ಧೂಮವತಿ ದೈವಸ್ಥಾನ ನಡಿಬೆಟ್ಟು, ಗುತ್ತಿನಾರ್ ಸುಧಾಕರ್ ಶೆಟ್ಟಿ ದೆಪ್ಪುಣಿಗುತ್ತು, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಉಪಸ್ಥಿತರಿರುವರು.
ಹೊಸ ಅಂಗಣ ಪ್ರಕಾಶನದ ಹರಿಶ್ಚಂದ್ರ ಪಿ ಸಾಲ್ಯಾನ್ ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಚಿತ್ರದುರ್ಗ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ

Mumbai News Desk

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ : ಮೂವರು ದರೋಡೆಕೋರರ ಬಂಧನ

Mumbai News Desk

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk