September 6, 2026
Mumbai News Kannada
ಸುದ್ದಿ

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ





ಹೊಸ ಅಂಗಣ ಪ್ರಕಾಶನ ಮೂಲ್ಕಿ ಪ್ರಕಟಿತ, ಜಾನಪದ ಲೇಖಕ, ಸಂಘಟಕ ಹರಿಶ್ಚಂದ್ರ ಪಿ ಸಾಲ್ಯಾನ್ ಅವರ 21ನೇ ಕೃತಿ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭವು ನವಂಬರ್ 6ರಂದು ಗುರುವಾರ ಸಂಜೆ 4.30ಕ್ಕೆ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಜರಗಲಿದೆ.
ಮೂಲ್ಕಿ – ಮೂಡುಬಿದ್ರೆ ಕ್ಷೇತ್ರದ ಜನಪ್ರಿಯ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ನಾರಾಯಣ ಗುರು ನರ್ಸಿಂಗ್ ಹೋಮ್ ಮುಲ್ಕಿಯ ಡಾ. ರಂಜನಾ, ಕಲ್ಲಾಟೆ ದೈವಸ್ಥಾನದ ಗುತ್ತಿನಾರ್ ವಿಶುಕುಮಾರ್ ಶೆಟ್ಟಿ, ಶ್ರೀ ಧೂಮವತಿ ದೈವಸ್ಥಾನ ನಡಿಬೆಟ್ಟು, ಗುತ್ತಿನಾರ್ ಸುಧಾಕರ್ ಶೆಟ್ಟಿ ದೆಪ್ಪುಣಿಗುತ್ತು, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಉಪಸ್ಥಿತರಿರುವರು.
ಹೊಸ ಅಂಗಣ ಪ್ರಕಾಶನದ ಹರಿಶ್ಚಂದ್ರ ಪಿ ಸಾಲ್ಯಾನ್ ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ

Mumbai News Desk

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk

ತುಳು ಕೂಟದ ಫೌಂಡೇಶನ್, ನಲ್ಲಸೋಪಾರ , ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್-ನಲ್ಲಸೋಪರ  ವಾರ್ಷಿಕೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಮಜ್ ಗಾಂವ್ ನ ರಾಜ್ ಕಮಲ್ ಟೈಲರ್ಸ್ ನ ಮಾಲಕ ದೇವಪ್ಪ ಪೂಜಾರಿ ನಿಧನ

Mumbai News Desk