July 23, 2026
Mumbai News Kannada
ಪ್ರಕಟಣೆ

ತುಳು ಸಂಘ ಬೋರಿವಲಿ ವತಿಯಿಂದ ನ. 16ರಂದು ಸ್ವಚ್ಛತಾ ಅಭಿಯಾನ







ಮುಂಬಯಿ: ತುಳು ಸಂಘ ಬೋರಿವಲಿ 2010ರಲ್ಲಿ ಸ್ಥಾಪನೆಯಾಗಿ ಬೋರಿವಲಿ ಹಾಗೂ ಅದರ ಸುತ್ತಮುತ್ತಲಿನ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ. ಈ ಸಂಘವು ತನ್ನ “ಯುವ ತುಳು, ಬೋರಿವಲಿ” ಯುವ ವಿಭಾಗದ ಮೂಲಕ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿದೆ.

ನವೆಂಬರ್ 16ರಂದು (ಭಾನುವಾರ) ಬೆಳಿಗ್ಗೆ 8.00 ರಿಂದ 10.00 ಗಂಟೆಯವರೆಗೆ ಬೋರಿವಲಿ ಪಶ್ಚಿಮದ ಎಸ್.ವಿ. ರಸ್ತೆ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮಹಾನಗರಪಾಲಿಕೆಯ ಸಹಯೋಗದಲ್ಲಿ ನಡೆಯಲಿದೆ.

ಈ ಅಭಿಯಾನದಲ್ಲಿ ರೋಟರಿ ಕ್ಲಬ್ ಆಫ್ ಬೋರಿವಲಿ, ಬೋರಿವಲಿ ಅಡ್ವೋಕೇಟ್ಸ್ ಬಾರ್ ಅಸೋಸಿಯೇಶನ್, ಮತ್ತು ಮುಂಬೈ ಮಾರ್ಚ್ ತಂಡ ಸೇರಿದಂತೆ ಅನೇಕ ಸಂಸ್ಥೆಗಳು ಪಾಲ್ಗೊಳ್ಳಲಿವೆ. ಸುಮಾರು 500–600 ಸ್ವಯಂಸೇವಕರು ಭಾಗವಹಿಸಲಿದ್ದಾರೆ. ಭಾಗವಹಿಸುವ ಎಲ್ಲರಿಗೂ ಟಿ-ಶರ್ಟ್‌ಗಳು, ಗ್ಲೌಸ್‌ ಇತ್ಯಾದಿಗಳು, ಲಘು ಉಪಹಾರ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತದೆ.

ಮಾನ್ಯ ಸಂಸದರು ಹಾಗೂ ಕೇಂದ್ರ ಮಂತ್ರಿ ಪಿಯೂಷ್ ಗೋಯಲ್ ಮತ್ತು ಶಾಸಕ ಸಂಜಯ ಉಪಾಧ್ಯಾಯ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನವೆಂಬರ್ 4ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್ ಮೈಂದನ್, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾ. ರಾಘವ, ಕೋಶಾಧಿಕಾರಿ ದಿವಾಕರ ಕರ್ಕೇರ, ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್ ಸುವರ್ಣ, ಜೊತೆ ಕಾರ್ಯದರ್ಶಿ ತಿಲೋತ್ತಮ ವೈದ್ಯ, ಮಹಿಳಾ ಕಾರ್ಯದರ್ಶಿ ವಿಜಯಲಕ್ಷ್ಮಿ ದೇವಾಡಿಗ, ಅನಿಲ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹಾಗೂ ಸ್ವಚ್ಛತೆಯ ಸಂದೇಶವನ್ನು ಹರಡಲು ತುಳು ಹಾಗೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತುಳು ಸಂಘ ಬೋರಿವಲಿ ಪರವಾಗಿ ಅಧ್ಯಕ್ಷ ಗೌರವ ಅಧ್ಯಕ್ಷರಾದ ವಿರಾರ್ ಶಂಕರ್ ಶೆಟ್ಟಿ, ಹರೀಶ್ ಮೈಂದನ್ ಮತ್ತು ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾ. ರಾಘವ ಎಂ. ಮಹಿಳಾ ಕಾಯಾಧ್ಯಕ್ಷೆ ಶೋಭಾ ಶೆಟ್ಟಿ ವಿನಂತಿಸಿದ್ದಾರೆ.



Related posts

ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 8ರಂದು ಮಹಿಳಾ ದಿನಾಚರಣೆ: ಪ್ರೊ. ನಳಿನಿ ವಿಶ್ವನಾಥ ಕಾರ್ನಾಡ್ ಸಂಸ್ಮರಣ ಪ್ರಶಸ್ತಿಗೆ ಅಮಿತಾ ಭಾಗ್ವತ್ ಆಯ್ಕೆ

Mumbai News Desk

ದೊಡ್ಡಣ್ಣ ಗುಡ್ಡೆಯ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಮೇ 9 ರಿಂದ ಮೇ 13 ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿ, ಮಾ 16 ರಂದು ವಿದ್ಯಾರ್ಥಿ ವೇತನ, ವಿಕಲಚೇತನ ಹಾಗೂ ವಿಧವಾ ವೇತನಗಳಿಗೆ ಅರ್ಜಿಗಳ ಆಹ್ವಾನ,

Mumbai News Desk

ಕುಲಾಲ ಪ್ರತಿಷ್ಠಾನ ಮಂಗಳೂರು- ಏಪ್ರಿಲ್ 13 ರಂದು ಕುಲಾಲ ಪರ್ಬ

Mumbai News Desk

ಜ. 28  ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ 

Mumbai News Desk

ಜಗಜ್ಯೋತಿ ಕಲಾವೃಂದದಿಂದ ಮಹಿಳೆಯರಿಗಾಗಿ ಅಖಿಲ ಭಾರತ ಮಟ್ಟದ ಕಥಾ ಮತ್ತು ಕವಿತಾ ಪ್ರಶಸ್ತಿ ಸ್ಪರ್ಧೆ ಆಹ್ವಾನ

Mumbai News Desk