July 23, 2026
Mumbai News Kannada
ಸುದ್ದಿ

ಮಂಗಳೂರು : ಉದ್ಯಮಿ, ಕಂಬಳ ಸಂಘಟಕನ ಪುತ್ರನ ಮೃತದೇಹ ನದಿ ತೀರದಲ್ಲಿ ಪತ್ತೆ







ಖ್ಯಾತ ಕಂಬಳ ಸಂಘಟಕ ಮತ್ತು ಉದ್ಯಮಿ ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್​ ಆಳ್ವ ಅವರ ಮೃತದೇಹ ನದಿ ತೀರದಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದೆ. ಖ್ಯಾತ ಉದ್ಯಮಿ ಮತ್ತು ಕರಾವಳಿ ಕಂಬಳ ಸಂಘಟಕರಾದ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29) ಅವರ ಮೃತದೇಹ ಶಾಂಭವಿ ನದಿ ತೀರದಲ್ಲಿಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
ನವೆಂಬರ್ 5ರ ರಾತ್ರಿ ನಾಪತ್ತೆಯಾಗಿದ್ದ ಅಭಿಷೇಕ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಘಟನೆಯಿಂದ ಸ್ಥಳೀಯ ಸಮುದಾಯದಲ್ಲಿ ಆಘಾತ ಮತ್ತು ಶೋಕ ಉಂಟಾಗಿದೆ.
ಮಾಹಿತಿ ಪ್ರಕಾರ, ಅಭಿಷೇಕ್ ಆಳ್ವ ನವೆಂಬರ್ 5ರ ರಾತ್ರಿ ಸುಮಾರು 10 ಗಂಟೆಗೆ ಮುಲ್ಕಿ ಬಪ್ಪನಾಡು ಬ್ರಿಡ್ಜ್ ಬಳಿ ತಮ್ಮ ಕಾರ್‌ನ್ನು ನಿಲ್ಲಿಸಿ ನಾಪತ್ತೆಯಾಗಿದ್ದರು. ಕಾರ್‌ನಲ್ಲಿ ಅವರ ವೈಯಕ್ತಿಕ ವಸ್ತುಗಳು ಕಂಡುಬಂದಿದ್ದರಿಂದ ಕುಟುಂಬಸ್ಥರು ಆತಂಕಗೊಂಡು ತಕ್ಷಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಆಗಿನಿಂದಲೇ ಪೊಲೀಸ್ ತಂಡ, ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ನದಿಯಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು.
ಆದರೆ ಈಗ ಬಪ್ಪನಾಡು ಸಮೀಪದ ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ. ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಗುರುತಿಸಿ ಪೊಲೀಸ್‌ಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧಿಸಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಯ ಶಂಕೆಯ ಮೇಲೆ ತನಿಖೆ ಆರಂಭವಾಗಿದೆ.



Related posts

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ

Mumbai News Desk

ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ – ಪತ್ರಕರ್ತರಿಗೆ ವಿಶೇಷ ಪ್ರದರ್ಶನ

Mumbai News Desk

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ

Chandrahas