July 23, 2026
Mumbai News Kannada
ಸುದ್ದಿ

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ







ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದ್ದು, ಒಟ್ಟು 325 ಜನ ಮಾತ್ರ ಭಾಗಿಯಾಗಬೇಕು ಎಂದು ತಿಳಿಸಿದೆ

ನವೆಂಬರ್​ 7ರಂದು ಇದೇ ವಿಚಾರವಾಗಿ ಕಲಬುರಗಿ ವಿಭಾಗೀಯ ಪೀಠದಲ್ಲಿ ನಡೆದಿದ್ದ ವಿಚಾರಣೆ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಜಿಲ್ಲಾಡಳಿತಕ್ಕೆ ನಾವು ನಮ್ಮ ಪ್ರಸ್ತಾವನೆ ನೀಡಿದ್ದೇವೆ. ಸರ್ಕಾರದ ನಿರ್ಧಾರವನ್ನು ಅಡ್ವೊಕೆಟ್ ಜನರಲ್ ತಿಳಿಸಬೇಕು ಎಂದು ಹೇಳಿದ್ದರು. ಜಿಲ್ಲಾಡಳಿತ ಪರವಾಗಿ ವಾದ ಮಾಡಿದ್ದ ಅಡ್ವೊಕೆಟ್ ಜನರಲ್ ಶಶಿಕರಣ್​ ಶೆಟ್ಟಿ, ಪಥಸಂಚನಲಕ್ಕಾಗಿ 11 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಲಾಗಿದ್ದು, ಪ್ರತಿಯೊಬ್ಬರಿಗೂ ಪ್ರತ್ಯೇಕ ದಿನ ಅವಕಾಶ ನೀಡಲು ಚಿಂತಿಸಲಾಗಿದೆ. ಇದಕ್ಕಾಗಿಒಂದು ವಾರ ಕಾಲಾವಕಾಶ ನೀಡುವಂತೆ ನ್ಯಾಯಾಲಕ್ಕೆ ಮನವಿ ಮಾಡಿದ್ದರು. ನ. 13 ಅಥವಾ 16ರಂದು ಕಾರ್ಯಕ್ರಮಕ್ಕೆ ಕಲ್ಯಾಣ ಮಂಟಪ ಲಭ್ಯವಿದೆ . ಹೀಗಾಗಿ ಅದೇ ದಿನಾಂಕದಲ್ಲಿ ಅನುಮತಿ ನೀಡಿ ಎಂದು ಈ ವೇಳೆ ಅರ್ಜಿದಾರು ಮನವಿ ಮಾಡಿದ್ದು, ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಈಗ ಅರ್ಜಿದಾರರ ಮನವಿಯಂತೆ ನ.16ರಂದು ಪಥಸಂಸಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.



Related posts

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ಹಾಸ್ಯ ನಟ ರಾಕೇಶ್‌ ಪೂಜಾರಿ ಮನೆಗೆ ಕೊನೆಗೂ ರಿಷಬ್‌ ಶೆಟ್ಟಿ ದಂಪತಿ ಭೇಟಿ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

ಕಾಂದಿವಲಿ: ಯೂನಿಯನ್ ಬ್ಯಾಂಕ್ ನಿವೃತ್ತ ಅಧಿಕಾರಿ ಕುಸುಮಲತಾ ಸುವರ್ಣ ನಿಧನ

Mumbai News Desk