September 6, 2026
Mumbai News Kannada
ಸುದ್ದಿ

ಬೆಂಗಳೂರು : ವೃಕ್ಷಮಾತೆ, ಶತಾಯುಷಿ, ಸಾಲುಮರದ ತಿಮ್ಮಕ್ಕ ಇನ್ನಿಲ್ಲ





ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನರಾದರು
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.



Related posts

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಚಿತ್ರಾಪು: ವಿಠಲ ಬಂಗೇರ ನಿಧನ

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ.ಆರ್. ಪುತ್ರನ್ ಅವರಿಗೆ ನುಡಿನಮನ: ಅಂಧೇರಿಯಲ್ಲಿ ಸಂತಾಪ ಸಭೆ

Mumbai News Desk