28.4 C
Mumbai
March 7, 2026
Mumbai News Kannada
ಮುಂಬಯಿ

ಮೀರಾರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆ ಯಿಂದ ಸಂಪನ್ನ





ಮೀರಾರೋಡ್ ಪೂರ್ವದ ಮೀರಾಗಾಂವ್ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 10 ರಂದು ಅಪರಾಹ್ನ ಕಾರ್ತಿಕ ದೀಪೋತ್ಸವವು ವಿವಿಧ ಪೂಜಾ-ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು.

​ಶ್ರೀ ಸನ್ನಿಧಿಯ ಪ್ರಧಾನ ಅರ್ಚಕರಾದ ಸಾತಿಂಜ ಜನಾರ್ದನ ಭಟ್ ಅವರ ಪೌರೋಹಿತ್ಯದಲ್ಲಿ, ಶಿಮಂತೂರು ಮಜಲ ಗುತ್ತು ಬಾಬಾ ರಂಜನ್ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಸಾಂತಿಂಜ ಮಾಧವ ಭಟ್ ಹಾಗೂ ವಿಪ್ರವೃಂದದವರ ಸಹಕಾರದಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಹೂವಿನ ಪೂಜೆ, ರಂಗ ಪೂಜೆ, ದೀಪಾರಾಧನೆ ಹಾಗೂ ಪರಿವಾರ ದೇವರುಗಳಾದ ಶ್ರೀ ಗಣಪತಿ, ಶ್ರೀ ದುರ್ಗಾಮಾತೆ ಮತ್ತು ನವಗ್ರಹಗಳಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು.

​ಪ್ರಸಾದ ವಿತರಿಸಿ ಆಶೀರ್ವಚನ ನೀಡಿದ ಜನಾರ್ದನ ಭಟ್ ಅವರು, “ಕಾರ್ತಿಕ ದೀಪವನ್ನು ಬೆಳಗಿಸುವುದು ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ, ಅದು ಬೆಳಕಿನ ಶುದ್ಧತೆ ಮತ್ತು ಶಾಂತಿಯ ಸಂಕೇತವಾಗಿದೆ. ದೀಪವು ಲೌಕಿಕ ಹಾಗೂ ಅಲೌಕಿಕ ಸಂಬಂಧಗಳ ಕೊಂಡಿಯಾಗಿದೆ. ಕತ್ತಲನ್ನು ಹೊಡೆದೋಡಿಸುವ ಜ್ಯೋತಿಯು ಮನೆ-ಮನವನ್ನು ಬೆಳಗಿಸುವ ವಿಶಿಷ್ಟ ಶಕ್ತಿಯಾಗಿದೆ. ಅಸಂಖ್ಯಾತ ದೀಪಗಳ ಪ್ರಜ್ವಲನೆಯಿಂದ ನಮ್ಮಲ್ಲಿರುವ ಲೌಕಿಕ ಚಿಂತನೆಗಳು ದೂರವಾಗಿ ಮನಸ್ಸು ಚಿತ್ತ ಶಾಂತಿಯಲ್ಲಿರುತ್ತದೆ. ದೇವಸ್ಥಾನಗಳು ಪೂಜಾ ಸ್ಥಳಗಳಾಗಿದ್ದು, ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕೇಂದ್ರಗಳಾಗಿವೆ. ಇವುಗಳು ನಮ್ಮ ಸಂಪ್ರದಾಯ, ಸಂಸ್ಕೃತಿ ಮತ್ತು ಇತಿಹಾಸವನ್ನು ಬಿಂಬಿಸುತ್ತವೆ. ಅವುಗಳನ್ನು ಸಂರಕ್ಷಿಸುವುದು ನಮ್ಮ ಆದ್ಯತೆಯಾಗಿರಬೇಕು,” ಎಂದರು.

​ಇದೇ ಸಂದರ್ಭದಲ್ಲಿ ಬಂಟ್ಸ್ ಫೋರಂ ಮೀರಾ-ಭಾಯಂದರ್ ಮತ್ತು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.

​ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳಾದ ಡಾ. ಅರುಣೋದಯ ರೈ, ಅಮಿತಾ ಶೆಟ್ಟಿ ಕುತ್ಯಾರು, ನವೀನಾ ಭಂಡಾರಿ, ಉದಯ ಶೆಟ್ಟಿ ಪೆಲತ್ತೂರು, ಗಿರೀಶ್ ಶೆಟ್ಟಿ ತೆಳ್ಳಾರು, ಉದಯ ಎಂ. ಶೆಟ್ಟಿ ಮಾಲಾರ್ ಬೀಡು, ರಾಜೇಶ್ ಶೆಟ್ಟಿ ಕಾಪು, ಪ್ರಸನ್ನ ಶೆಟ್ಟಿ ಕುರ್ಕಾಲು, ಪ್ರಸನ್ನ ಬಿ. ಶೆಟ್ಟಿ ಬೋಳ, ಸಂಸ್ಥಾಪಕ ಕೃಷ್ಣ ಜಿ. ಶೆಟ್ಟಿ ಪರಿವಾರ ಸೇರಿದಂತೆ ಮಹಿಳಾ ಸದಸ್ಯೆಯರು, ವಿವಿಧ ಸಂಘ ಸಂಸ್ಥೆಗಳು, ಸಮುದಾಯ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕನ್ನಡಿಗೇತರರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.



Related posts

ಬಿಲ್ಲವರ ಅಸೋಸಿಯೇಶನಿನ ಮೀರಾ ರೋಡ್ ಸ್ಥಳೀಯ ಕಚೇರಿಯ ವತಿಯಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ಕನ್ನಡ ಸಂಘ ಸಯನ್ ದ್ವಿತೀಯ ವಾರ್ಷಿಕೋತ್ಸವ ಸಂಭ್ರಮ : ಒಗ್ಗಟ್ಟಿನಿಂದ ಸಂಘದ ಬಲವರ್ಧನೆಗೆ ಪ್ರವೀಣ್ ಭಟ್ ಕರೆ.

Mumbai News Desk

ಕರ್ನಾಟಕ ಸಂಘ ಪನ್ವೆಲ್ ವಾರ್ಷಿಕೋತ್ಸವ,

Mumbai News Desk

ಕನ್ನಡ ಸಂಘ ಸಯನ್ : ಯಶಸ್ವಿಯಾಗಿ ಜರಗಿದ ಅಟಿಡೊಂಜಿ ದಿನ, ಸಂಘವನ್ನು ಒಗ್ಗಟ್ಟಿನಿಂದ ಮುನ್ನಡೆಸೋಣ – ಎಂ ಜೆ ಪ್ರವೀಣ್ ಭಟ್

Mumbai News Desk

ದಿ. ಕರ್ನಾಟಕ ಕೋಆಪರೇಟಿವ್ ಕ್ರೆಡಿಟ್ ಸೊಸೈಟಿ 28ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ  ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ  ವತಿಯಿಂದ ರಕ್ತ ದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ.

Mumbai News Desk