September 6, 2026
Mumbai News Kannada
ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್





ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಸೆಪ್ಟೆಂಬರ್ 18ರಂದು ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ, ಈ ಆದೇಶವನ್ನು ಹೊರಡಿಸಿದೆ.

ಸದ್ಯ ಪುತ್ತೂರು ಉಪವಿಭಾಗಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಗಡಿಪಾರು ಆದೇಶವನ್ನು ರದ್ದುಗೊಳಿಸಿದ ನ್ಯಾಯಪೀಠ, ಪ್ರಕರಣವನ್ನು ಮರುವಿಚಾರಣೆಗೆ ಒಳಪಡಿಸುವಂತೆ ಸೂಚಿಸಿದೆ.
ʻಪ್ರಕರಣದ ಕುರಿತು ಹೊಸದಾಗಿ ವಿಚಾರಣೆಯನ್ನು ನಡೆಸಿ, ಮುಂದಿನ 15 ದಿನಗಳೊಳಗೆ ಸೂಕ್ತವಾದ ಕಾರಣಗಳು ಮತ್ತು ಕಾನೂನಿನ ಸೆಕ್ಷನ್‌ಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಹೊಸ ಆದೇಶವನ್ನು ಹೊರಡಿಸಬೇಕು,ʼಎಂದು ಪೀಠವು ಪುತ್ತೂರಿನ ಉಪವಿಭಾಗಾಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಹೈಕೋರ್ಟ್‌ನ ಈ ಆದೇಶದಿಂದಾಗಿ, ತಿಮರೋಡಿ ಅವರ ಮೇಲಿದ್ದ ಗಡೀಪಾರು ಭೀತಿ ಸದ್ಯಕ್ಕೆ ದೂರವಾಗಿದ್ದು, ಉಪವಿಭಾಗಾಧಿಕಾರಿ ನಡೆಸುವ ಹೊಸ ವಿಚಾರಣೆ ಮತ್ತು ಆದೇಶದತ್ತ ಎಲ್ಲರ ಚಿತ್ತ ನೆಟ್ಟಿದೆ.



Related posts

ಬಂದೂಕು ತೊರೆದು ಕೈಮಗ್ಗ ಸೀರೆಯುಟ್ಟು ರ್ಯಾಂಪ್ (Ramp)ವಾಕ್ ಮಾಡಿದ ಮಾಜಿ ನಕ್ಸಲರು: ‘ಲೆನಿನ್‌ನಿಂದ ಲಿನೆನ್‌ವರೆಗೆ…

Mumbai News Desk

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅಧಿಕೃತ ಚಾಲನೆ

Mumbai News Desk

ತಂತ್ರಜ್ಞಾನ ಮತ್ತು ಭರವಸೆಯ ಸಮ್ಮಿಲನ: ಭಾರತ್ ಬ್ಯಾಂಕ್‌ನಿಂದ ಹೊಸ ನೆಟ್ ಬ್ಯಾಂಕಿಂಗ್ ಅಪ್ಲಿಕೇಶನ್ ಸೇವೆಗಳಿಗೆ ಚಾಲನೆ.

Mumbai News Desk

ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ – ತಾಳಮದ್ದಳೆ 

Mumbai News Desk

ರಾಷ್ಟ್ರೀಯ ಮಹಾಮಾರ್ಗಗಳ ಪಕ್ಕದಲ್ಲಿರುವ ಅನಧಿಕೃತ ಧಾಬಾ, ಹೋಟೆಲ್‌ ತೆರವಿಗೆ ಮಹಾರಾಷ್ಟ್ರ ಸರ್ಕಾರ ಆದೇಶ

Mumbai News Desk