32 C
Mumbai
April 24, 2026
Mumbai News Kannada
ಪ್ರಕಟಣೆ

ಡಿ. 3 : ಕುಲಾಲ ಸಂಘ ಮುಂಬಯಿ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ – ಸನ್ಮಾನ – ಯಕ್ಷಗಾನ-ಸಾಂಸ್ಕೃತಿಕ ಕಾರ್ಯಕ್ರಮ





ಮುಂಬಯಿ : ಪ್ರತಿಷ್ಠಿತ ಕುಲಾಲ ಸಂಘ ಮುಂಬಯಿ ಇದರ ಮೀರಾ ರೋಡ್ – ವಿರಾರ್ ಸ್ಥಳಿಯ ಸಮಿತಿ ಯ ೧೯ನೇ ವಾರ್ಷಿಕ ಸ್ನೇಹ ಸಮ್ಮಿಲನವು ಡಿ. ೩ ರವಿವಾರ ಬೆಳಿಗ್ಗೆ. ೯ರಿಂದ ಸಂಜೆ ೫.೩೦ರ ವರಗೆ `ಶೆನಾಯ್ ಬ್ಯಾಂಕ್ವೆಟ್ ಹಾಲ್’, ಬೈರವಿ ಕಾಂಪ್ಲೆಕ್ಸ್, ಕನಕ್ಯೀಯ ರೋಡ್, ಮೀರಾ ರೋಡ್ (ಪೂ) ಇಲ್ಲಿ ಕುಲಾಲ ಸಂಘ ಮುಂಬಯಿ ಅಧ್ಯಕ್ಷರಾದ ರಘು ಎ. ಮೂಲ್ಯ ಇವರ ಅಧ್ಯಕ್ಷತೆಯಲ್ಲಿ ಹಾಗೂ ಸಂಘದ ಗೌರವ ಅಧ್ಯಕ್ಷರಾದ ಪಿ. ದೇವ್‌ದಾಸ್ ಎಲ್. ಕುಲಾಲ್ ಮತ್ತು ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರ ಉಪಸ್ಥಿತಿ ಹಾಗೂ ಸ್ಥಳೀಯ ಸಮಿತಿಯ ಕಾರ್ಯಕಾರಿ ಮಂಡಳಿಯ ಉಸ್ತುವಾರಿಯಲ್ಲಿ ಜರಗಲಿದೆ.

ಸಭಾಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಸುಂದರ್ ಕೆ. ಮೂಲ್ಯ ಮೀರಾ ರೋಡ್, (ಮಾಜಿ ಕಾರ್ಯಾಧ್ಯಕ್ಷರು, ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿ – ಕುಲಾಲ ಸಂಘ, ಮುಂಬಯಿ), ಆಶೋಕ ಆರ್. ಮೂಲ್ಯ, ಬ್ರಹ್ಮಾನಂದ ಥಾಣೆ (ಸಿ.ಎಮ್.ಡಿ., ಅಯ್ಯ ಪ್ಯಾಕರ್ಸ್ & ಮೋವರ್ಸ್), ಸಂಜಯ ರಾಜು ಕುಂದರ್, ವಿಕ್ರೋಲಿ (ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – (ಲೀಗಲ್) & ಕಂಪೆನಿ ಸೆಕ್ರಟರಿ, ಅಪರ್ ಇಂಡಸ್ಟಿçÃಸ್ ಲಿ.), ಜಗದೀಶ್ ಆರ್. ಬಂಜನ್, ಅಂಬರ್‌ನಾಥ್ (ಜಯದೀಪ್ ಕನಸ್ಟೆçಕ್ಷನ್ಸ್, ಅಂಬರ್‌ನಾಥ್), ಸುನಿಲ್ ಆರ್. ಸಾಲ್ಯಾನ್, (ಉದ್ಯಮಿ, ಭಾಯ್ಕಲ, ಮುಂಬಯಿ), ಪದ್ಮನಾಭ ಬಂಗೇರ, ಮೀರಾ ರೋಡ್ (ಉದ್ಯಮಿ) ಇವರು ಆಗಮಿಸಲಿರುವರು. ಅಂದು ಪರಿಸರದ ಎಸ್.ಎಸ್.ಸಿ.ಯಿಂದ ಡಿಗ್ರಿ ವೃತ್ತಿಪರ ಶಿಕ್ಷಣದಲ್ಲಿ ಉತ್ತೀರ್ಣರಾದ ಪರಿಸರದ ಕುಲಾಲ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಿಸಲಾಗುವುದು. ಅಲ್ಲದೆ ಸಂಘದ ಹಿರಿಯ ಕಾರ್ಯಕರ್ತರಾದ ಗಿರೀಶ್ ಬಿ. ಸಾಲ್ಯಾನ್, ದಾದರ್ (ಚೆಯರ್‌ಮ್ಯಾನ್, ಜ್ಯೋತಿ ಕೋ-ಆಪ್. ಕ್ರೆಡಿಟ್ ಸೊಸೈಟಿ ಲಿ.) ಸುಂದರ್ ಕೆ. ಮೂಲ್ಯ (ಮಾಜಿ ಕಾರ್ಯಾಧ್ಯಕ್ಷರು, ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿ), ಚಂದು ಕೆ. ಮೂಲ್ಯ, ವಿರಾರ್ (ಮಾಜಿ ಉಪ ಕಾರ್ಯಾಧ್ಯಕ್ಷರು, ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿ ), ಇವರನ್ನು ಗಣ್ಯರ ಉಪಸ್ಥಿಯಲ್ಲಿ ಸನ್ಮಾನಿಸಲಾಗುವುದು.

ಬೆಳಿಗ್ಗೆ ಗಂಟೆ ೯ ರಿಂದ ೧೦ ಭಜನೆ – ಗುರುವಂದನಾ ಭಜನಾ ಮಂಡಳಿಯ ಸದಸ್ಯರಿಂದ, ಸೋಲೋ ನೃತ್ಯ ಹಾಗೂ ಫ್ಯಾನ್ಸಿಡ್ರೆಸ್, ಪುಟಾಣಿ ಮಕ್ಕಳಿಂದ, ೧೧ ರಿಂದ ಸಭಾ ಕಾರ್ಯಕ್ರಮ, ಮಧ್ಯಾಹ್ನ ೧.೦೦ ರಿಂದ ಪ್ರೀತಿ ಭೋಜನ, ಅಪರಾಹ್ನ ೨.೦೦ ರಿಂದ ಸದಸ್ಯರ ಬಾಲಕಲಾವಿದರಿಂದ ನಾಗೇಶ್ ಪೊಳಲಿಯವರ ನಿರ್ದೇಶನದಲ್ಲಿ ಯಕ್ಷಗಾನ : ಅಗ್ರ ಪೂಜೆ (ಪೌರಾಣಿಕ ಪ್ರಸಂಗ) ಭಾಗವತರು : ನಾದಲೋಲ ಶ್ರೀ ಲಕ್ಷ್ಮೀನಾರಾಯಣ ಶೆಟ್ಟಿ ಚೆಂಡೆ: ಶ್ರೀ ಪ್ರವೀನ್ ಶೆಟ್ಟ, ಕಟೀಲು, ಮದ್ದಲೆ : ಹರೀಶ್ ಸಾಲ್ಯಾನ್ ಚಕ್ರತಾಳ : ಶ್ರೀ ಪ್ರೀತೇಶ್ ಬಿ. ಮೂಲ್ಯ.

ನಂತರ ಮಹಿಳಾ ವಿಭಾಗದ ಸದಸ್ಯೆಯವರಿಂದ, ಸದಸ್ಯರಿಂದ ಹಾಗೂ ಯುವ ವಿಭಾಗದವರಿಂದÀ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿರುವುದು ಎಂದು ಸಮಿತಿಯ ಕಾರ್ಯಾಧ್ಯಕ್ಷ ಶಂಕರ್ ವೈ. ಮೂಲ್ಯ, ಉಪಕಾರ್ಯಾಧ್ಯಕ್ಷ ಮೋಹನ್ ಬಂಜನ್, ಕಾರ್ಯದರ್ಶಿ ನ್ಯಾ| ಉಮನಾಥ್ ಮೂಲ್ಯ, ಕೋಶಾಧಿಕಾರಿ ಸತೀಶ್ ಬಂಗೇರ, ಜೊತೆ ಕಾರ್ಯದಶಿಗಳಾದ ಉಮೇಶ್ ಎಂ. ಬಂಗೇರ, ಸದಾನಂದ ಪಿ. ಸಾಲ್ಯಾನ್, ಜೊತೆ ಕೋಶಾಧಿಕಾರಿ ಚಂದ್ರಹಾಸ್ ಮೂಲ್ಯ, ಉಮೇಶ್ ಬಂಗೇರ, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣ ಎಸ್. ಮೂಲ್ಯ, ಯೋಗಿಶ್ ಬಂಗೇರÀ, ಸಮಿತಿ ಸದಸ್ಯರಾದ ರಘು ಸಿ. ಮೂಲ್ಯ, ರಾಜೀವ್ ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಾವತಿ ಎಸ್. ಸಾಲ್ಯಾನ್, ಉಪ ಕಾರ್ಯಾಧ್ಯಕ್ಷೆ ರೇಣುಕಾ. ಸಾಲ್ಯಾನ್, ಕಾರ್ಯದರ್ಶಿ, ಪ್ರಮೀಳಾ ಬಂಜನ್, ಕೋಶಾಧಿಕಾರಿ ಜಯಂತಿ ಯು. ಬಂಗೇರ, ಜೊತೆ ಕಾರ್ಯದರ್ಶಿ ಸುಜಾತ ಆರ್. ಸಾಲ್ಯಾನ್, ಜೊತೆ ಕೋಶಾಧಿಕಾರಿ ಅರ್ಚನಾ ಎಸ್. ಕುಲಾಲ್, ಜೊತೆ ಕಾರ್ಯದರ್ಶಿ ನಳಿನಿ ವಿ. ಬಂಜನ್, ಯುವ ವಿಭಾಗದ ಮಯೂರ್ ವೈ. ಸಾಲ್ಯಾನ್, ಮೇಘಾ ಎಂ. ಬಂಜನ್, ನಿಶ್ಚಿತಾ ಆರ್. ಬಂಗೇರ ಹಾಗೂ ಗುರುವಂದನಾ ಭಜನಾ ಮಂಡಳಿಯ ಕಾರ್ಯಾಧ್ಯಕ್ಷ , ಅರ್ಚಕ ಯಶೋಧರ ಬಂಗೇರ, ಕಾರ್ಯದರ್ಶಿ ಅದ್ಯಪಾಡಿ ವಾಮನ್ ಡಿ. ಮೂಲ್ಯ, ಕೋಶಾಧಿಕಾರಿ ರೋಹಿತ್ ಕೆ. ಬಂಜನ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ: ಎ. 4ರಂದು ಸುರೇಖಾ ದೇವಾಡಿಗ ಅವರ ‘ಧೀಮಂತ ಧರ್ಮಪಾಲ’ ಜೀವನ ಕಥನ ಆಧಾರಿತ ಗೌರವ ಗ್ರಂಥ ಬಿಡುಗಡೆ

Mumbai News Desk

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk

ಆಗಸ್ಟ್ 10 : ಬಿಲ್ಲವ ಘಾಟ್ಕೋಪರ್ ಹಾಗೂ ತುಳು ಕೂಟ ಅಸಲ್ಪಾ, ಇದರ ಆಶ್ರಯದಲ್ಲಿ ‘ಘಾಟ್ಕೋಪರ್ ದ ಆಟಿದ ಒಂಜಿ ದಿನ’

Mumbai News Desk

ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಸಭೆ

Mumbai News Desk

ವರ್ಲಿ : ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ (ರಿ), ನ 17 ರಂದು ಮಾಲೆ ಧಾರಣೆ

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk