July 23, 2026
Mumbai News Kannada
ಕರ್ನಾಟಕ

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ







ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ
ಹೇಳಿದ್ದಾರೆ.
ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು ಕೂಗುವ ಕೂಗು ಕೃತಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿರುವ ಅವರು ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಅವರು ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು.
ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಈಗ ಸಲಿಂಗಕಾಮ ಇಲ್ಲ. 60-70 ರ ದಶಕದಲ್ಲಿದ್ದಾಗ ಇದು ಯಕ್ಷಗಾನದಲ್ಲಿ ಇತ್ತು. ನಾನು ವಿದ್ಯಾರ್ಥಿಯಾಗಿದ್ದಾಗ ನೋಡಿದ್ದನ್ನು ಹೇಳಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶವನ್ನು ಈ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸತ್ಯವನ್ನು ಹೇಳಲು ಹಿಂಜರಿಯಬಾರದು. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಆ ಮೂಲಕ ರಂಗಭೂಮಿ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗ್ತಿತ್ತು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದರು.

ನಾನು ಕಳೆದ 30 ವರ್ಷಗಳಿಂದ ಯಕ್ಷಗಾನವನ್ನು ಮಾಡುತ್ತಾ ಬಂದಿದ್ದೇನೆ. ಈಗಲೂ ತಾಳಮದ್ದಳೆ ಅರ್ಥವನ್ನು ಹೇಳುತ್ತಿದ್ದೇನೆ. ನನಗೆ ಯಕ್ಷಗಾನದ ಬಗ್ಗೆ ಬಹಳಷ್ಟು ಗೌರವವಿದೆ ಎಂದರು.



Related posts

ಬಿಲ್ಲವ, ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅನಿತಾ ಕಾಸರಗೋಡು ಬಂಧನ

Mumbai News Desk

ಕರ್ನಾಟಕ ರಾಜಕೀಯ ದಿಕ್ಸೂಚಿ: ಸಿದ್ದರಾಮಯ್ಯ ಅವರ ಉಪಾಹಾರ ಕೂಟ ಮತ್ತು ನಾಯಕತ್ವ ಬದಲಾವಣೆಯ ಆಂತರಿಕ ಚಿತ್ರಣ

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ

Mumbai News Desk

ಬೈಂದೂರು ಅಗ್ನಿಶಾಮಕ ಅಧಿಕಾರಿ ರಾಜೇಶ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಪದಕ

Mumbai News Desk

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು

Mumbai News Desk