July 23, 2026
Mumbai News Kannada
ಕರ್ನಾಟಕ

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ







ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಒಂದಲ್ಲಾ, ಎರಡಲ್ಲಾ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ರಾಬರಿ ಮಾಡಿ, ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಮಟ ಮಟ ಮಧ್ಯಾಹ್ನದ ಸಮಯದಲ್ಲಿ ಎಟಿಂಎಗೆ ಹಣ ಹಾಕೋ ವಾಹನದಿಂದ ರಾಬರಿ ಮಾಡಿ ದರೋಡೆ ಕೋರರು ಎಸ್ಕೇಪ್ ಆಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿ ಎಟಿಎಂಗೆ ಹಣ ಹಾಕಲು ಬಂದಿದ್ದಾಗ ಇನ್ನೋವಾ ಕಾರಿನಲ್ಲಿ ಬಂದ ಏಳೆಂಟು ಜನರ ಗ್ಯಾಂಗ್, ನಾವು ಆರ್‌ಬಿಐ ಅಧಿಕಾರಿಗಳು ಎಂದು ಹೆದರಿಸಿದ್ದಾರೆ. ಬಳಿಕ ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿದ್ದಾರೆ. ಡ್ರೈವರ್ ನನ್ನ ಡೈರಿ ಸರ್ಕಲ್ ಕಡೆಗೆ ಕರೆತಂದಿದ್ದಾರೆ. ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ವಾಹನ ನಿಲ್ಲಿಸಿದ್ದಾರೆ. ಅಲ್ಲಿಂದ ಹಣ ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.
ಮಧ್ಯಾಹ್ನದ ಸಮಯದಲ್ಲಿ ಎಟಿಂಎ ಗೆ ಹಣ ಹಾಕೊ ವಾಹನದಿಂದ ರಾಬರಿ ಮಾಡಲಾಗಿದ್ದು, ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಯನ್ನು ದೋಚಿಕೊಂಡು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿ ಎಟಿಎಂಗೆ ಹಣ ಹಾಕಲು ಬ್ಯಾಂಕ್ ಸಿಬ್ಬಂದಿ ಹಾಗೂ ಸೆಕ್ಯುರಿಟಿ ಬಂದಿದ್ದರು. ಈ ವೇಳೆ ಇನ್ನೋವಾ ಕಾರಿನಲ್ಲಿ ಬಂದ ಏಳೆಂಟು ಜನರ ಗ್ಯಾಂಗ್, ನಾವು ಆರ್‌ಬಿಐ ಅಧಿಕಾರಿಗಳು ಅಂತ ಹೆದರಿಸಿದ್ದಾರೆ. ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿದ್ದಾರೆ, ಆದರೆ ಡ್ರೈವರ್ ನನ್ನು ಮಾತ್ರ ಡೈರಿ ಸರ್ಕಲ್ ಕಡೆಗೆ ಕರೆತಂದಿದ್ದಾರೆ. ಬಳಿಕ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ವಾಹನ ನಿಲ್ಲಿಸಿದ್ದಾರೆ. ಅಲ್ಲಿಂದ ಹಣವನ್ನು ತಮ್ಮ ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.



Related posts

ಎಸ್ ಎಸ್ ಎಲ್ ಸಿ ಫಲಿತಾಂಶ- ಶ್ರೀಷಾ ಜಯ ಪೂಜಾರಿಗೆ ಶೇ.97.12 ಅಂಕ

Mumbai News Desk

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mumbai News Desk

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಕರ್ನಾಟಕ ವಿಧಾನಸಭಾ ಉಪಚುನಾವಣೆ – ಮೂರೂ ಕ್ಷೇತ್ರಗಳ್ಳಲ್ಲಿ ಕಾಂಗ್ರೇಸ್ ಭರ್ಜರಿ ಜಯ

Mumbai News Desk

ಮಂಗಳೂರು : ಲಿಯೋ ಡಿಸ್ಟ್ರಿಕ್ಟ್ 317D: ಪಾಠ ಶಾಲಾ ಪ್ರಾಜೆಕ್ಟ್ ಯಶಸ್ವಿ ಉದ್ಘಾಟನೆ

Mumbai News Desk