September 6, 2026
Mumbai News Kannada
ಸುದ್ದಿ

ಉಡುಪಿ : ಮಂದಾರ್ತಿ ಮೇಳದ ಕಲಾವಿದ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನ





​ನವೆಂಬರ್ 19 ರ ಬುಧವಾರ ಮಧ್ಯರಾತ್ರಿ ಕುಂದಾಪುರದ ಬಳಿ ನಡೆದ ಮಂದಾರ್ತಿ ಮೇಳದ ಯಕ್ಷಗಾನ ಪ್ರದರ್ಶನದಲ್ಲಿ, ಮಹಿಷಾಸುರನ ಪಾತ್ರ ನಿರ್ವಹಿಸಿ ಹೊರಬಂದ ಕಲಾವಿದರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
​ನಿಧನರಾದವರು ಶೃಂಗೇರಿ ಸಮೀಪದ ನೆಮ್ಮಾರ ನಿವಾಸಿ, ಎರಡನೇ ಮೇಳದ ಪ್ರತಿಭಾವಂತ ಕಲಾವಿದ ಈಶ್ವರ ಗೌಡ ನೆಮ್ಮಾರ.
​ಅವರು ‘ದೇವಿ ಮಹಾತ್ಮೆ’ ಪ್ರಸಂಗದಲ್ಲಿ ತಮ್ಮ ಪ್ರದರ್ಶನ ಮುಗಿಸಿ, ಚೌಕಿ ಒಳಗೆ ಪೂರ್ಣ ವೇಷಭೂಷಣ ತೆಗೆಯುವ ಮುನ್ನವೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ತಕ್ಷಣವೇ ಸಹ ಕಲಾವಿದರು ನೆರವಿಗೆ ಧಾವಿಸಿದರೂ, ಆಸ್ಪತ್ರೆಗೆ ಸಾಗಿಸುವ ಮುನ್ನವೇ ಅವರು ಕೊನೆಯುಸಿರೆಳೆದರು.
​ಈಶ್ವರ ಗೌಡ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.



Related posts

ಸಿಜೆಪಿ–ಕೇಂದ್ರ ಜಂಟಿ ಸುದ್ದಿಗೋಷ್ಠಿ: ನೀಟ್ ಪೇಪರ್ ಸೋರಿಕೆ ಪ್ರತಿಭಟನೆ ವಾಪಸ್, ಹೊಸ ಕಾಯ್ದೆಗೆ ಸಂಪುಟ ಅಂಕಿತ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.

Mumbai News Desk

ಜೀವನ್ ಸೇವಾ ಬ್ರಿಗೇಡ್‌ ಪಡುಬಿದ್ರಿ: ವೈದ್ಯಕೀಯ ಆರ್ಥಿಕ ನೆರವು ವಿತರಣೆ

Mumbai News Desk

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 

Mumbai News Desk