
ಮೂಲ್ಕಿ ಸೀಮೆಯ 9 ಮಾಗಣೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 9 ಮಾಗಣೆಯ ಭಕ್ತ ವೃಂದದ ಸಹಕಾರದಿಂದ ನ.19ರ, ಬುಧವಾರ ಲಕ್ಷ ದೀಪೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಅಂದು ಸೂಕ್ತ ಹೋಮ, ಲಕ್ಷ ಕುಂಕುಮರ್ಚನೆ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು.
ಸಂಜೆ 5 ಗಂಟೆಗೆ ಸಾಮೂಹಿಕ ದುರ್ಗ ನಮಸ್ಕಾರ, ಲಲಿತ ಸಹಸ್ರನಾಮ ಪಾರಾಯಣ, ರಾತ್ರಿ 7:30ಕ್ಕೆ ಮಹಾಪೂಜೆ ಲಕ್ಷ ದೀಪ ಉತ್ಸವ, ಅಷ್ಟಾವಧಾನ ಸೇವೆ ಜರಗಿತು.






ಕ್ಷೇತ್ರದ ತಂತ್ರಿಗಳಾದ ಶೀಬರೂರು ಗುಣಪಾಲಕೃಷ್ಣ ತಂತ್ರಿ ಹಾಗೂ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ಎಲ್ಲ ಧಾರ್ಮಿಕ ಕಾರ್ಯಗಳು ವಿಧಿವತ್ತಾಗಿ ನಡೆಯಿತು.
ಈ ಸಂದರ್ಭ ಶಾಸಕ ಉಮಾನಾಥ್ ಕೋಟ್ಯಾನ್, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಸಾದ್, ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಮಾಜಿ ಮೊಕ್ತೇಸರ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ, ಬಪ್ಪನಾಡು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ಮತ್ತು ಭಕ್ತದಿಗಳು ಉಪಸ್ತಿತರಿದ್ದರು.




