July 23, 2026
Mumbai News Kannada
ಸುದ್ದಿ

ವಿಶ್ವನಾಥ ಯು. ಮಾಡಾ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಂತಾಪ







ಮುಂಬಯಿ: ಸಮಾಜಸೇವಕ ಹಾಗೂ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಮಾಜಿ ಅಧ್ಯಕ್ಷ ವಿಶ್ವನಾಥ ಯು. ಮಾಡಾ ಅವರು ನ. 19 ರಂದು ನಿಧನರಾಗಿದ್ದು, ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಕ್ರಿಯಾಶೀಲವಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಗೌರವ ಕೋಶಾಧಿಕಾರಿ ಸದಾನಂದ ಆಚಾರ್ಯ, ಉಪಾಧ್ಯಕ್ಷರುಗಳು, ಸಲಹೆಗಾರರು, ಇತರ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಸಾಗರೋತ್ತರ ಸಮಿತಿಯ ಉಪಾಧ್ಯಕ್ಷರು, ಜಿಲ್ಲಾ ಕಾರ್ಯಧ್ಯಕ್ಷರು, ರಾಜ್ಯ ಸಂಯೋಜಕರು ಮತ್ತು ಕೇಂದ್ರ ಹಾಗೂ ಜಿಲ್ಲಾ ಸಮಿತಿಯ ಎಲ್ಲಾ ಸದಸ್ಯರುಗಳು ಗಾಢ ಸಂತಾಪ ಸೂಚಿಸಿದ್ದಾರೆ.

ವಿಶ್ವನಾಥ ಮಾಡಾ ಅವರು ಶಿಸ್ತಿನ, ಸರಳತೆ ಹಾಗೂ ನಿಸ್ವಾರ್ಥ ಸಮಾಜಸೇವೆಯಿಂದ ಸಮುದಾಯದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರ ನಾಯಕತ್ವ, ಮಾರ್ಗದರ್ಶನ ಮತ್ತು ಸೇವಾಭಾವ ಸಂಘಟನೆಯನ್ನು ಸದಾ ಪ್ರೇರೇಪಿಸುತ್ತಿತ್ತು. ಅವರ ಕುಟುಂಬಕ್ಕೆ ದುಃಖವನ್ನು ತಾಳುವ ಶಕ್ತಿ ದೊರಕಲೆಂದು ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರ ಸೇವೆಯನ್ನು ಸ್ಮರಿಸಿ ಸಂತಾಪ ಸೂಚಿಸಿದ್ದಾರೆ.



Related posts

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ

Mumbai News Desk

ಜೋಡು ಜೀಟಿಗೆ” ಪೌರಾಣಿಕ ನಾಟಕದ ಪ್ರಥಮ ಪ್ರದರ್ಶನ, ನಾಟಕದ ಮೂಲಕ ಧರ್ಮ ಜಾಗೃತಿಗೊಳ್ಳಲಿ :, ಐಕಳ ಹರೀಶ್ ಶೆಟ್ಟಿ

Mumbai News Desk

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.

Mumbai News Desk

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Mumbai News Desk

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk