September 6, 2026
Mumbai News Kannada
ಸುದ್ದಿ

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತಿದ್ದ ಇಬ್ಬರ ಬಂಧನ





ಪಾಕಿಸ್ತಾನ ಪರ ಗೂಢಚರ್ಯೆ ಮಾಡುತ್ತಿದ್ದ ಇಬ್ಬರನ್ನ ಉಡುಪಿ ಪೊಲೀಸರು ಬಂಧಿದ್ದಾರೆ. ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್ ಕೆಲಸ ಮಾಡ್ತಿದ್ದ ಈ ಇಬ್ಬರು ನೌಕರರು, ಕೆಲ ಗೌಪ್ಯ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡ್ತಿದ್ರು ಎನ್ನಲಾಗ್ತಿದೆ. ದೇಶದ್ರೋಹದ ಕೆಲಸ ಮಾಡ್ತಿದ್ದವರ ಬಗ್ಗೆ ಅನುಮಾನ ಮೂಡಿದ್ದು, ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ದೂರು ನೀಡಿದ್ರು. ಈ ದೂರಿನ ಆಧಾರದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶ ಮೂಲದ ರೋಹಿತ್, ಸಂತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಭಾರತದವರೇ ಆಗಿದ್ದು, ಹಣಕ್ಕಾಗಿ ಶತ್ರು ರಾಷ್ಟ್ರ ಪಾಕಿಸ್ತಾನ ಜೊತೆ ಸಂಪರ್ಕ ಹೊಂದಿದ್ದರು ಎಂದು ತಿಳಿದು ಬಂದಿದೆ. ಈ ಇಬ್ಬರು ಆರೋಪಿಗಳಿ ಸುಷ್ಮಾ ಮೇರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದರು.

ಕೊಚ್ಚಿನ್ ಶಿಪ್ ಯಾರ್ಡ್ ಸಂಸ್ಥೆ ಭಾರತೀಯ ನೌಕಾಪಡೆಗೆ ಟಗ್ ಗಳನ್ನು ನಿರ್ಮಿಸಿ ಕೊಡುತ್ತದೆ. ಹಾಗೇ ಖಾಸಗಿಯವರಿಗೂ ನೌಕೆಗಳನ್ನು ನಿರ್ಮಿಸಿ ಕೊಡುತ್ತಿದ್ದು, ಕೊಚ್ಚಿನ್ ಶಿಪ್ ಯಾರ್ಡ್ ಮುಖ್ಯ ಕಚೇರಿ ಕೇರಳದಲ್ಲಿದೆ. ಈ ಶಿಪ್​ ಯಾರ್ಡ್​ನಲ್ಲಿ ಕೆಲಸಕ್ಕೆಂದು ಸೇರಿಕೊಂಡ ಉತ್ತರ ಭಾರತದ ಮೂಲದವರು ದೇಶ ದ್ರೋಹದ ಕೆಲಸ ಮಾಡಿದ್ದಾರೆ.
ಪಾಕಿಸ್ತಾನ ಪರ ಬೇಹುಗಾರಿಕೆ: ಉಡುಪಿ ಪೊಲೀಸರು ಹೇಳಿದ್ದೇನು?

ಪ್ರಕರಣ ಸಂಬಂಧ ರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಗಳು ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಈ ಪ್ರಕರಣ ಸದ್ಯ ದೇಶದ ಭದ್ರತೆ ದೃಷ್ಟಿಯಿಂದ ಗಂಭೀರ ಆತಂಕ ಉಂಟುಮಾಡಿದೆ. ಉಡುಪಿ ಪೊಲೀಸರು ಆರೋಪಿಗಳ ಜಾಲದ ಮೂಲ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.



Related posts

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ ಡಿ. ದೇವರಾಜ್ ಅರಸು ರವರ ಜನ್ಮದಿನಾಚರಣೆ ಮತ್ತು ಪರಿಶಿಷ್ಟ ಪಂಗಡದ ಇಬ್ಬರು ಪಿ.ಹೆಚ್.ಡಿ ಪದವಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ

Mumbai News Desk

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ

Mumbai News Desk

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು: ಗೋವಾದ ಮಡಗಾಂವ್ ನಿಲ್ದಾಣದಲ್ಲಿ ಘಟನೆ

Mumbai News Desk

ಮಹಾರಾಷ್ಟ್ರ ರಾಜ್ಯಪಾಲರು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ : ಘಟನೆ ಹೇಗೆ ನಡೆಯಿತು? ‘ಕಳಪೆ ಗೋಚರತೆ… ನಂತರ ಅಪಘಾತ’

Mumbai News Desk

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

Mumbai News Desk