31 C
Mumbai
June 8, 2026
Mumbai News Kannada
ಪ್ರಕಟಣೆ

ನ.29 ರಂದು ಮುಂಬಯಿ ವಿವಿಯ ಕನ್ನಡ ವಿಭಾಗದಲ್ಲಿ ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭ





ಮುಂಬಯಿ: ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಮತ್ತು ಗೋರೆಗಾಂವ್ ಕರ್ನಾಟಕ ಸಂಘದ ಸಂಯುಕ್ತ ಆಶ್ರಯದಲ್ಲಿ ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

​ದಿನಾಂಕ 29-11-2025, ಶನಿವಾರದಂದು, ಅಪರಾಹ್ನ 2.30 ರಿಂದ, ಸಾಂತಾಕ್ರೂಜ್ ಪೂರ್ವದಲ್ಲಿರುವ ಕಲೀನಾ ಕ್ಯಾಂಪಸ್‌ನ ಜೆ.ಪಿ.ನಾಯಕ್ ಭವನದಲ್ಲಿ ಈ ಸಮಾರಂಭ ನಡೆಯಲಿದೆ.

​ಸಮಾರಂಭದಲ್ಲಿ ಲೇಖಕ ಶ್ರೀನಿವಾಸ ಜೋಕಟ್ಟೆ ಅವರ ಮೂರು ಕೃತಿಗಳು ಮತ್ತು ಅನಿತಾ ಪಿ. ತಾಕೊಡೆ ಅವರ ಒಂದು ಕೃತಿ ಲೋಕಾರ್ಪಣೆಗೊಳ್ಳಲಿವೆ.

​ಬಿಡುಗಡೆಗೊಳ್ಳಲಿರುವ ಕೃತಿಗಳ ವಿವರ:

  1. “ಅದೆಲ್ಲಾ ಬಿಟ್ಟು” (ಕತೆಗಳು – ಸಾಹಿತ್ಯ ಸುಗ್ಗಿ ಪ್ರಕಾಶನ, ಬೆಂಗಳೂರು) – ಶ್ರೀನಿವಾಸ ಜೋಕಟ್ಟೆ
  2. “ಪ್ರಚಂಡ ಮತ್ತು ಮಹಾಕಾಲ” (ಲೇಖನಗಳು) – ಶ್ರೀನಿವಾಸ ಜೋಕಟ್ಟೆ
  3. “ಬದುಕು ಬತ್ತದ ಭರವಸೆ” (ಲೇಖನಗಳು – ಶ್ರೀರಾಮ ಪ್ರಕಾಶನ, ಮಂಡ್ಯ) – ಶ್ರೀನಿವಾಸ ಜೋಕಟ್ಟೆ
  4. “ಮೇಣಕ್ಕಂಟಿದ ಬತ್ತಿ” (ತಾಕೊಡೆ ಎಂಟರ್ ಪ್ರೈಸಸ್, ಮುಂಬಯಿ) – ಅನಿತಾ ಪಿ. ತಾಕೊಡೆ (ಈ ಕೃತಿಯು ಗವಿಸಿದ್ಧ ಎನ್ ಬಳ್ಳಾರಿ ಕಾವ್ಯ ಪ್ರಶಸ್ತಿ ವಿಜೇತವಾಗಿದೆ.)

​ಕಾರ್ಯಕ್ರಮದ ವಿವರ:

  • ಅಧ್ಯಕ್ಷತೆ: ಡಾ. ಜಿ.ಎನ್. ಉಪಾಧ್ಯ (ಮುಂಬಯಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥರು)
  • ಕೃತಿಗಳ ಬಿಡುಗಡೆ:
    • ​ಸೂರ್ಯಕಾಂತ್ ಜಯ ಸುವರ್ಣ (ಕಾರ್ಯಾಧ್ಯಕ್ಷರು: ಭಾರತ್ ಬ್ಯಾಂಕ್, ಅಧ್ಯಕ್ಷರು: ರಾಷ್ಟ್ರೀಯ ಬಿಲ್ಲವ ಮಹಾಮಂಡಲ)
    • ​ಮಿತ್ರಾ ವೆಂಕಟ್ರಾಜ್ (ಪ್ರಶಸ್ತಿ ಪುರಸ್ಕೃತ ಕತೆಗಾರರು, ಕಾದಂಬರಿಕಾರರು)
    • ​ವಿಕ್ರಾಂತ್ ಎಸ್. ಉರ್ವಲ್ (ಆಡಳಿತ ನಿರ್ದೇಶಕರು: ಐಐಟಿಸಿ ಮುಂಬಯಿ)
  • ಕೃತಿಗಳ ಪರಿಚಯ:
    • ​ಡಾ| ದಿನೇಶ್ ಶೆಟ್ಟಿ ರೆಂಜಾಳ (ಪತ್ರಕರ್ತರು, ಉದಯವಾಣಿ – ಮುಂಬಯಿ)
    • ​ಅಮಿತಾ ಭಾಗ್ವತ್ (ಸಾಹಿತಿ, ‘ಹವ್ಯಕ ಸಂದೇಶ’ದ ಮಾಜಿ ಸಂಪಾದಕರು)
  • ಪ್ರಾಸ್ತಾವಿಕ: ಸರಿತಾ ಸುರೇಶ ನಾಯಕ್ (ಉಪಾಧ್ಯಕ್ಷರು: ಗೋರೆಗಾಂವ್ ಕರ್ನಾಟಕ ಸಂಘ)
  • ಕಾರ್ಯಕ್ರಮ ನಿರ್ವಹಣೆ: ಡಾ. ಪೂರ್ಣಿಮಾ ಸುಧಾಕರ ಶೆಟ್ಟಿ (ಸಹಪ್ರಾಧ್ಯಾಪಕರು, ಕನ್ನಡ ವಿಭಾಗ ಮುಂಬಯಿ ವಿ.ವಿ.)

​ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಮತ್ತು ಗೋರೆಗಾಂವ್ ಕರ್ನಾಟಕ ಸಂಘದ ಪದಾಧಿಕಾರಿಗಳು ಎಲ್ಲಾ ಪುಸ್ತಕ ಪ್ರೇಮಿಗಳಿಗೆ ಈ ಸಮಾರಂಭಕ್ಕೆ ಹಾರ್ದಿಕ ಸ್ವಾಗತವನ್ನು ಕೋರಿದ್ದಾರೆ.



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk

ಮಾ. 08 ರಂದು ಥಾಣೆಯಲ್ಲಿ ಸಾಫಲ್ಯ ಸೇವಾ ಸಂಘದ ಮುಖವಾಣಿ’ಸಾಫಲ್ಯ’ ತ್ರೈಮಾಸಿಕದ ಬೆಳ್ಳಿ ಹಬ್ಬ ಹಾಗೂ ಮಹಿಳಾ ದಿನಾಚರಣೆ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 8ರಂದು ಮಹಿಳಾ ದಿನಾಚರಣೆ: ಪ್ರೊ. ನಳಿನಿ ವಿಶ್ವನಾಥ ಕಾರ್ನಾಡ್ ಸಂಸ್ಮರಣ ಪ್ರಶಸ್ತಿಗೆ ಅಮಿತಾ ಭಾಗ್ವತ್ ಆಯ್ಕೆ

Mumbai News Desk

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ

Mumbai News Desk

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk