32 C
Mumbai
March 7, 2026
Mumbai News Kannada
ಪ್ರಕಟಣೆ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 34ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ: ನವೆಂಬರ್ 30ರಂದು ವಿಜೃಂಭಣೆಯ ಆಚರಣೆ





ಮೀರಾ ರೋಡ್: ಮುಂಬೈನ ಮೀರಾ ರೋಡ್ ಪ್ರದೇಶದ ಮೀರಾ ಗಾಂವ್, ಮೀರಾ ಸೊಸೈಟಿಯಲ್ಲಿ ನೆಲೆಸಿರುವ ಮತ್ತು ತುಳು-ಕನ್ನಡಿಗರಿಂದ ಸ್ಥಾಪಿಸಲ್ಪಟ್ಟಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ವರ್ಷದ 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ ಯನ್ನು ನವೆಂಬರ್ 30, ಭಾನುವಾರದಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.

​ದೇವಸ್ಥಾನದ ಆಡಳಿತ ಮುಕ್ತೇಸರರಾದ ಶ್ರೀಮಂತೂರು ಮಜಲು ಗುತ್ತು ಬಾಬಾ ರಂಜನ್ ಶೆಟ್ಟಿ ಅವರ ಸಾರಥ್ಯದಲ್ಲಿ ಹಾಗೂ ಪ್ರಧಾನ ಅರ್ಚಕರಾದ ಸಾಣೂರು ಸಾಂತಿಂಜ ಜನಾರ್ದನ್ ಭಟ್ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಲಿವೆ. ಶ್ರೀ ಜಯಶೀಲ ಗುರುಸ್ವಾಮಿ ಯವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮಗಳ ವಿವರ:

ಸಮಯಕಾರ್ಯಕ್ರಮ
ಬೆಳಿಗ್ಗೆ 6:00 – 7:00ಗಣಹೋಮ
ಬೆಳಿಗ್ಗೆ 7:00 – 8:00ರುದ್ರಾಭಿಷೇಕ
ಬೆಳಿಗ್ಗೆ 9:30 – 10:30ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ ಭಜನೆ
ಬೆಳಿಗ್ಗೆ 10:30 – 11:30ಶ್ರೀ ಜಯಶೀಲ ಗುರುಸ್ವಾಮಿ ನೇತೃತ್ವದಲ್ಲಿ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿಯ ಸದಸ್ಯರಿಂದ ಭಜನೆ
ಬೆಳಿಗ್ಗೆ 11:30 ಕ್ಕೆಪಡಿಪೂಜೆ (ಪಡಿಸೇವೆ) ಹಾಗೂ ಮಹಾ ಮಂಗಳಾರತಿ
ಮಧ್ಯಾಹ್ನ 12:30 ಕ್ಕೆಮಹಾ ಅನ್ನಸಂತರ್ಪಣೆ (ಪ್ರಸಾದ ವಿತರಣೆ)

ದೇವಸ್ಥಾನದ ಸ್ಥಾಪಕರಾದ ದಿವಂಗತ ವಿಶ್ವನಾಥ ಪೂಂಜ ಪರಿವಾರ, ಕೃಷ್ಣ ಶೆಟ್ಟಿ, ಪ್ರಧಾನ ಅರ್ಚಕರಾದ ಶ್ರೀ ಸಾಂತಿಂಜ ಮಾಧವ್ ಭಟ್, ಶ್ರೀ ಮಹಾಲಿಂಗೇಶ್ವರ ಟ್ರಸ್ಟ್ ಸದಸ್ಯರು ಹಾಗೂ ಮೀರಾ ಸೊಸೈಟಿ ಸಮಿತಿ ಸದಸ್ಯರು ಸಮಸ್ತ ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಮಹಾಲಿಂಗೇಶ್ವರ ದೇವರ ಮತ್ತು ಕಲಿಯುಗ ವರದಾತ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಈ ಮೂಲಕ ವಿನಂತಿಸಿಕೊಂಡಿದ್ದಾರೆ.



Related posts

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ.ಅ.17ರಂದು ಪೂಜಾ ದೇವರುಗಳ ರಜತ ಬಿಂಬ ಪ್ರತಿಷ್ಟಾಪನೆ, ಸತ್ಯನಾರಾಯಣ ಪೂಜೆ

Mumbai News Desk

ಮೇ 2: ಇನ್ನಂಜೆ  ಶಶಿಧರ ಶೆಟ್ಟಿ  ದಂಪತಿಯ ನೇತೃತ್ವದಲ್ಲಿ ಕಾಪು ಶೃಷ್ಟಿ ರೆಸಿಡೆನ್ಸಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ

Mumbai News Desk