30 C
Mumbai
April 24, 2026
Mumbai News Kannada
ಸುದ್ದಿ

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ





ದೇಶದ ಪ್ರಧಾನಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಕರಾವಳಿಯ ಮಂದಿ ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿಯವರು, ಅಲ್ಲಿಂದ ಸೇನಾ ಹೆಲಿಕಾಪ್ಟರ್’ನಲ್ಲಿ ಉಡುಪಿಯ ಹೆಲಿಪ್ಯಾಡ್’ಗೆ ಬಂದಿಳಿದರು.

ಅಲ್ಲಿಂದ ರೋಡ್ ಶೋ ಆರಂಭವಾಗಿದ್ದು, ದಾರಿಯುದ್ದಕ್ಕೂ ಲಕ್ಷಾಂತರ ಮಂದಿ ಹೂಮಳೆ ಸುರಿಸಿ, ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ.

ಉಡುಪಿಯಿಂದ ಕೃಷ್ಣ ಮಠದವರೆಗೂ ನಡೆಯುತ್ತಿರುವ ರೋಡ್ ಶೋದಲ್ಲಿ ಪ್ರಧಾನಿ ಮೋದಿಯವರು ಅಭಿಮಾನಿಗಳತ್ತ ಕೈ ಬೀಸಿ ಸಾಗಿದ್ದಾರೆ.

ರೋಡ್ ಶೋ ಆರಂಭವಾದಾಗಿನಿಂದಲೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನಿಂತು ಜೈಘೋಷ ಹಾಕಿ, ಹೂಮಳೆ ಸುರಿಸಿ, ನೆಚ್ಚಿನ ನಾಯಕನನ್ನು ಹತ್ತರದಿಂದ ನೋಡಿ ಕಣ್ತುಂಬಿಕೊಂಡರು.

ವಿವಿಧ ಜಾನಪದ ಕಲಾತಂಡಗಳಿಂದ ಮೋದಿಗೆ ಅದ್ಧೂರಿ ಸ್ವಾಗತಕೋರಲಾಯ್ತು. ಮೋದಿ ಮೋದಿ ಅಂತ ಹರ್ಷೋದ್ಘಾರ ಮೊಳಗಿಸಿದ ಅಭಿಮಾನಿಗಳ ಮೋದಿ ಕಂಡು ಖುಷಿಪಟ್ಟರು.. ಈ ವೇಳೆ ಪ್ರಧಾನಿ ಮೋದಿ ಸಹ ಅಭಿಮಾನಿಗಳನ್ನ ಕೈಬೀಸಿ ಮಂದಹಾಸದ ನಗೆ ಬೀರಿದರು.



Related posts

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ

Mumbai News Desk

ಶ್ರೀನಿವಾಸ ಜೋಕಟ್ಟೆಯವರ ‘ಅದೆಲ್ಲಾ ಬಿಟ್ಟು’ ಕತಾಸಂಕಲನಕ್ಕೆಕನ್ನಡ ಸಾಹಿತ್ಯ ಪರಿಷತ್ ನ ಕೆ. ವಾಸುದೇವಾಚಾರ್ ದತ್ತಿ ಪ್ರಶಸ್ತಿ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಥಾಣೆ  :ಜಯರಾಮ ಸಾಂತ ನಿಧನ

Mumbai News Desk

ಭಾರತ್ ಬ್ಯಾಂಕ್ ಕುರಿತು ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಪ್ರಕಟಣೆಯ ಬಗ್ಗೆ, ಬ್ಯಾಂಕ್ ನ ಎಂ ಡಿ ಮತ್ತು ಸಿ ಇ ಓ ವಿದ್ಯಾನಂದ ಕರ್ಕೇರರಿಂದ ಸ್ಪಷ್ಟನೆ

Mumbai News Desk

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk