28.4 C
Mumbai
March 7, 2026
Mumbai News Kannada
ಸುದ್ದಿ

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ





ದೇಶದ ಪ್ರಧಾನಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಕರಾವಳಿಯ ಮಂದಿ ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿಯವರು, ಅಲ್ಲಿಂದ ಸೇನಾ ಹೆಲಿಕಾಪ್ಟರ್’ನಲ್ಲಿ ಉಡುಪಿಯ ಹೆಲಿಪ್ಯಾಡ್’ಗೆ ಬಂದಿಳಿದರು.

ಅಲ್ಲಿಂದ ರೋಡ್ ಶೋ ಆರಂಭವಾಗಿದ್ದು, ದಾರಿಯುದ್ದಕ್ಕೂ ಲಕ್ಷಾಂತರ ಮಂದಿ ಹೂಮಳೆ ಸುರಿಸಿ, ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ.

ಉಡುಪಿಯಿಂದ ಕೃಷ್ಣ ಮಠದವರೆಗೂ ನಡೆಯುತ್ತಿರುವ ರೋಡ್ ಶೋದಲ್ಲಿ ಪ್ರಧಾನಿ ಮೋದಿಯವರು ಅಭಿಮಾನಿಗಳತ್ತ ಕೈ ಬೀಸಿ ಸಾಗಿದ್ದಾರೆ.

ರೋಡ್ ಶೋ ಆರಂಭವಾದಾಗಿನಿಂದಲೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನಿಂತು ಜೈಘೋಷ ಹಾಕಿ, ಹೂಮಳೆ ಸುರಿಸಿ, ನೆಚ್ಚಿನ ನಾಯಕನನ್ನು ಹತ್ತರದಿಂದ ನೋಡಿ ಕಣ್ತುಂಬಿಕೊಂಡರು.

ವಿವಿಧ ಜಾನಪದ ಕಲಾತಂಡಗಳಿಂದ ಮೋದಿಗೆ ಅದ್ಧೂರಿ ಸ್ವಾಗತಕೋರಲಾಯ್ತು. ಮೋದಿ ಮೋದಿ ಅಂತ ಹರ್ಷೋದ್ಘಾರ ಮೊಳಗಿಸಿದ ಅಭಿಮಾನಿಗಳ ಮೋದಿ ಕಂಡು ಖುಷಿಪಟ್ಟರು.. ಈ ವೇಳೆ ಪ್ರಧಾನಿ ಮೋದಿ ಸಹ ಅಭಿಮಾನಿಗಳನ್ನ ಕೈಬೀಸಿ ಮಂದಹಾಸದ ನಗೆ ಬೀರಿದರು.



Related posts

ಮಹಾರಾಷ್ಟ್ರ ಪ್ರದೇಶ ಕಿಸನ್ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ಸುರೇಶ್ ಶೆಟ್ಟಿ ಯೆಯ್ಯಾಡಿ ನಿಯುಕ್ತಿ.

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಇಂದಿನಿಂದ ರೈಲು ಪ್ರಯಾಣ ದರ ಏರಿಕೆ : ರೈಲ್ವೆಯಿಂದ ಪ್ರಯಾಣದರ ಏರಿಕೆ ಅಧಿಸೂಚನೆ

Mumbai News Desk

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk