July 23, 2026
Mumbai News Kannada
ಕರ್ನಾಟಕ

ಕರ್ನಾಟಕ : ಹೈಕಮಾಂಡ್‌ ತೀರ್ಮಾನವೇ ಅಂತಿಮ, ಇದೇ ನಮ್ಮಿಬ್ಬರ ಮಂತ್ರ: ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ-ಡಿಸಿಎಂ ಘೋಷಣೆ







ಒಟ್ಟಿಗೆ ಸೇರಿ ನಾವು ಕೆಲಸ ಮಾಡಿಕೊಂಡು ಹೋಗ್ತೇವೆ. ಹೈಕಮಾಂಡ್‌ ಏನು ಹೇಳುತ್ತೆ ಹಾಗೆ ಕೆಲಸ ಮಾಡಿಕೊಂಡು ಹೋಗ್ತೇವೆ. ಮುಂದೆ 2028ರಲ್ಲಿ ಸರಕಾರವನ್ನು ಅಧಿಕಾರಕ್ಕೆ ತರಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ನಾವು ಯೋಜನೆ ರೂಪಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ ಬೆಳಗ್ಗಿನ ಉಪಹಾರಕ್ಕೆ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿದ್ದ ಡಿಕೆ ಶಿವಕುಮಾರ್‌, ಉಪಹಾರದ ನಂತರದ ಪತ್ರಿಕಾಗೋಷ್ಠಿಯಲ್ಲಿ ಈ ಮಾತುಗಳನ್ನು ತಿಳಿಸಿದರು.

ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯ, “ಹೈಕಮಾಂಡ್‌ ತೀರ್ಮಾನವೇ ಅಂತಿಮ, ಇದೇ ನಮ್ಮಿಬ್ಬರ ಮಂತ್ರ. ಇದನ್ನು ನಾವು ಹಿಂದೆಯೂ ಸ್ಪಷ್ಟಪಡಿಸಿದ್ದೇವೆ. ಈಗಲೇ ಇದನ್ನೇ ಹೇಳುತ್ತೇವೆ,” ಎಂದರು.

ಮುಂದಿನ ಎರಡು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಊಟಕ್ಕೆ ನಮ್ಮ ಮನೆಗೆ ಬರಲಿದ್ದಾರೆ ಎಂದೂ ಡಿಕೆ ಶಿವಕುಮಾರ್‌ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.



Related posts

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ

Mumbai News Desk

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 96% ಅಂಕ ಗಳಿಸಿ ಸಾಧನೆ ಮಾಡಿದ ಆಶ್ವಿ ಎಚ್. ಬಂಗೇರ

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ- ಶ್ರೀಷಾ ಜಯ ಪೂಜಾರಿಗೆ ಶೇ.97.12 ಅಂಕ

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ -2025ಕೆ ಎಸ್ ರಾವ್ ಸ್ಮಾರಕ ಸರಕಾರಿ ಪ್ರೌಢಶಾಲೆ ಚಿತ್ರಾಪು, ಮುಲ್ಕಿ ವಿದ್ಯಾರ್ಥಿಗಳ ಸಾಧನೆ

Mumbai News Desk