ಮುಂಬಯಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಮಾಜಿ ಅಧ್ಯಕ್ಷ, ಸಮಾಜಸೇವಕ ವಿಶ್ವನಾಥ ಯು. ಮಾಡಾ ಅವರು ನ. 19 ರಂದು ನಿಧನರಾಗಿದ್ದು, ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಕ್ರಿಯಾಶೀಲವಾಗಿರುವ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಯವರ ಉಪಸ್ಥಿತಿಯಲ್ಲಿ ನಿತ್ಯಾನಂದ ಡಿ. ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ, ಡಿ. 1 ರಂದು ಸಂಜೆ 6 ಗಂಟೆಗೆ ಪೇಜಾವರ ಮಠ, ಸಂತಾಕ್ರೂಸ್ ಪೂರ್ವ ಇಲ್ಲಿ ಶ್ರದ್ದಾಂಜಲಿ ಸಭೆಯು ನಡೆಯಲಿದೆ.
ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಮತ್ತು ಅಭಿಮಾನಿಗಳು ಈ ಸಭೆಯಲ್ಲಿ ಉಪಸ್ಥಿತರಿರಬೇಕಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಪರವಾಗಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ವಿನಂತಿಸಿದ್ದಾರೆ.




