July 22, 2026
Mumbai News Kannada
ಕರ್ನಾಟಕ

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು







ಶಬರಿಮಲೆ ಅಯ್ಯಪ್ಪ ಮಾಲೆ  ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು  ಕಾಲೇಜಿನಿಂದ  ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ  ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಬಳಿ ಬಂದು ಪ್ರಿನ್ಸಿಪಾಲ್​​ ನಡುವೆ ವಾಗ್ವಾದ ನಡೆಸಿದ್ದಾರೆ.

ಚಿಕ್ಕಮಗಳೂರು ನಗರದ ಎಂ ಇ ಯಸ್ ಪಿಯು ಕಾಲೇಜಿನಲ್ಲಿ ಮೊದಲ ವರ್ಷದ ಪಿಯು ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಾರೆ. ಆದ್ರೆ, ಇದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಯ್ಯಪ್ಪ ಮಾಲೆ‌ ತೆಗೆದು ಬರುವಂತೆ ಸೂಚನೆ ನೀಡಿ ಹೊರಗೆ ಕಳುಹಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ನೂರಾರು ಹಿಂದೂ ಸಂಘಟನೆಗಳ ಮುಖಂಡರು, ಕಾಲೇಜು ಬಳಿ ಬಂದು ಕಾಲೇಜ್ ಅಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಯ್ಯಪ್ಪ ಮೂಲಾಧಾರಿಗಳನ್ನ ಹೊರ ಕಳಿಸಿದ್ರೆ ನೂರಾರು ವಿದ್ಯಾರ್ಥಿಗಳಿಗೆ ಮಾಲೆ ಹಾಕಿಸುವ ಎಚ್ಚರಿಕೆ ನೀಡಿದರು.

ಕಾಲೇಜು ಬಳಿ ನೂರಾರು ಹಿಂದೂ ಸಂಘಟನೆ ಕಾರ್ಯಕರ್ತರು ಆಗಮಿಸಿ ಆಡಳಿ ಮಂಡಿಳಿ ವಿರುದ್ಧ ಆಕ್ರೋಶ ವ್ಯಕ್ತಡಿಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಬಸವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಳಿ ವಾದ ವಿವಾದದ ಬಳಿಕ ಅಂತಿಮವಾಗಿ ಅಯ್ಯಪ್ಪ ಮಾಲೆ ಹಾಕಿಕೊಂಡು ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ತರಗತಿಗೆ ಕೂಡಲು ಪ್ರಿನ್ಸಿಪಾಲ್ ಅನುಮತಿ ನೀಡಿದ್ದಾರೆ. ಜೊತೆಗೆ ಆಡಳಿತ ಮಂಡಳಿ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಎಂ ಇ ಎಸ್ ಪಿಯು ಕಾಲೇಜಿನ ಪ್ರಿನ್ಸಿಪಾಲ್, ನಾವು ಸರ್ಕಾರ ಹಾಗೂ ಕಾಲೇಜು ಆಡಳಿತ ಮಂಡಳಿಯ ಆದೇಶ ಪಾಲಿಸಿದ್ದೇವೆ. ನಮ್ಮಲ್ಲಿ ಸಮವಸ್ತ್ರ ಬಿಟ್ಟು ಬೇರೆ ಯಾವುದೇ ಬಟ್ಟೆ ಧರಿಸುವಂತಿಲ್ಲ. ವಿದ್ಯಾರ್ಥಿಗಳಿಗೆ ನಾವು ತಿಳಿ ಹೇಳಿದ್ದೇವೆ ಅಷ್ಟೇ. ಸದ್ಯಕ್ಕೆ ಮೂವರು ವಿದ್ಯಾರ್ಥಿಗಳನ್ನ ತರಗತಿಗೆ ಕೂರುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.



Related posts

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಶೇ. 66.14 ವಿದ್ಯಾರ್ಥಿಗಳು ತೇರ್ಗಡೆ,-ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

Mumbai News Desk

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ

Mumbai News Desk

“ಸಹಕಾರ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಹಾಗೂ ಅಭಿವಂದನಾ ಕಾರ್ಯಕ್ರಮ

Mumbai News Desk

ಬಳ್ಳಾರಿ : ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ- ಶ್ರೀಷಾ ಜಯ ಪೂಜಾರಿಗೆ ಶೇ.97.12 ಅಂಕ

Mumbai News Desk