32 C
Mumbai
April 24, 2026
Mumbai News Kannada
ಸುದ್ದಿ

ಯು.ಎ.ಇ. ನೆಲದಲ್ಲಿ “ಕುಲಾಲ ಫ್ಯಾಮಿಲಿ ದುಬೈ ಯು.ಎ.ಇ. ವಿಹಾರ ಕೂಟ 2025”





​ದುಬೈ: ಕುಲಾಲ ಫ್ಯಾಮಿಲಿ ದುಬೈ ಯು.ಎ.ಇ. ವತಿಯಿಂದ ಆಯೋಜಿಸಲಾದ ವಿಹಾರ ಕೂಟ 2025, ದುಬೈನ ಜಬೀಲ್ ಪಾರ್ಕ್‌ನಲ್ಲಿ ಡಿಸೆಂಬರ್ 2 ರಂದು ಯಶಸ್ವಿಯಾಗಿ ನಡೆಯಿತು.

​ಸುಮಾರು 130ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಸ್ವಜಾತಿ ಬಾಂಧವರು ಈ ಕೂಟದಲ್ಲಿ ಭಾಗವಹಿಸಿದ್ದರು. ಬೆಳಿಗ್ಗೆ 9:00 ಗಂಟೆಗೆ ಉಪಾಹಾರದೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಕುಮಾರಿ ದೇಶ್ನ ಪ್ರವೀಣ್ ಕುಲಾಲ್ ಹಾಗೂ ಧನ್ವಿ ಸಚಿನ್ ಕುಲಾಲ್ ಪ್ರಾರ್ಥನೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

​ದುಬೈನಲ್ಲಿ ಹಲವು ವರ್ಷಗಳಿಂದ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದು, ಹಿರಿಯರು ಹಾಗೂ ಮಾರ್ಗದರ್ಶಕರಾಗಿರುವ ಶ್ರೀ ಪದ್ಮನಾಭ ಕುಲಾಲ್ ಎಕ್ಕಾರು ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.

​ಮಕ್ಕಳಿಗೆ ಹಾಗೂ ದೊಡ್ಡವರಿಗಾಗಿ ವಿವಿಧ ಮೋಜಿನ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು. ಮಧ್ಯಾಹ್ನ ಪ್ರೀತಿ ಭೋಜನವನ್ನು ಏರ್ಪಡಿಸಲಾಗಿತ್ತು. ಕೊನೆಯಲ್ಲಿ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು. ನೆರೆದಿದ್ದವರು ಅತ್ಯಂತ ಉತ್ಸಾಹದಿಂದ ತಮ್ಮ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಅಕ್ಷಯ ಕುಲಾಲ್, ಮುಖೇಶ್ ಕುಲಾಲ್, ಆನಂದ ಸಾಲ್ಯಾನ್, ಪ್ರವೀಣ್ ಕುಲಾಲ್, ನವನೀತ್ ಕುಲಾಲ್ ಹಾಗೂ ದಾಕ್ಷಾಯಿಣಿ ಕುಲಾಲ್ ಅವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಸಹಕರಿಸಿದರು.



Related posts

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. 16 ನೇ ವರ್ಷದ ವರಮಹಾಲಕ್ಷ್ಮಿ ಪೂಜಾಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk

ರಂಗನಟ, ದೂರದರ್ಶನ ಕಲಾವಿದ ರಮೇಶ ಶಿವಪುರ ಅವರಿಗೆ ಮಾತೃ ವಿಯೋಗ

Mumbai News Desk

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,

Mumbai News Desk

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಮಿಸ್ ಕ್ವೀನ್ ಕರಾವಳಿ 2025 ಆಗಿ ಪೂರ್ವಿ ಇ ಕುಲಾಲ್ ಆಯ್ಕೆ

Mumbai News Desk

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk