July 23, 2026
Mumbai News Kannada
ಪ್ರಕಟಣೆ

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ







ವಸಾಯಿ ಪರಿಸರದ ತುಳು- ಕನ್ನಡಿಗರ ಸುಪರಿಚಿತ ಮಣಿಕಂಠ ಸೇವಾ ಸಮಿತಿ ವಸಾಯಿ ಇವರ 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ.9 ರಂದು ಮಂಗಳವಾರ, ವಸಾಯಿ ಪಶ್ಚಿಮದ ದತ್ತಾನಿ ಸ್ಕ್ವೇರ್ ಬಳಿಯ ಯುನಿಟಿ ಮಾಲ್ ನ ಅರ್ನ ಸ್ವರ್ಣ ಬ್ಯಾಂಕ್ವೆಟ್ ಹಾಲ್ ನ 3ನೇ ಮಹಡಿಯಲ್ಲಿ ಜರಗಲಿದೆ.
ಅಂದು ಬೆಳಗ್ಗೆ ಗಂಟೆ 6.30ಕ್ಕೆ ಶ್ರೀಕ್ರಷ್ಣ ಭಟ್ ಅವರ ಪೌರೋಹಿತ್ಯದಲ್ಲಿ ಗಣ ಹೋಮ, ಗಂಟೆ 9.30ಕ್ಕೆ ಸ್ಥಳೀಯ ಮಹಿಳೆಯರಿಂದ ಭಜನೆ, 11ಕ್ಕೆ ಶ್ರೀ ನಾರಾಯಣ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ ಬಳಿಕ ಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಲಿಯುಗದ ವರದ ಶ್ರೀ ಅಯ್ಯಪ್ಪ ಸ್ವಾಮಿ ಪ್ರಸಾದವನ್ನು ಸ್ವೀಕರಿಸಬೇಕೆಂದು ಮಣಿಕಂಠ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ಕರ್ನೂರು ಶಂಕರ ಆಳ್ವ, ಅಧ್ಯಕ್ಷರಾದ ಯಶೋಧರ ವಿ. ಕೋಟ್ಯಾನ್ ಕಾಪು, ಉಪಾಧ್ಯಕ್ಷರಾದ ಎಕ್ಕಾರು ದಿನೇಶ್ ಹೆಗ್ಡೆ, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿಗಳಾದ ರಾಧಾಕ್ರಷ್ಣ ಶೆಟ್ಟಿ, ಜತೆ ಕೋಶಾಧಿಕಾರಿ ಸುಧೀರ್ ಸಾಲ್ಯಾನ್, ಪೂಜಾ ಸಮಿತಿ ಸಲಹೆಗಾರರಾದ ಜಗದೀಶ್ ಎಸ್ ಶೆಟ್ಟಿ, ಮತ್ತು ಉಮೇಶ್ ಕಾಂತಾವರ, ಮುಖ್ಯ ಸಲಹೆಗಾರರಾದ ನಾಗರಾಜ ಶೆಟ್ಟಿ, ಅಶೋಕ್ ಶೆಟ್ಟಿ, ಪಾಂಡು ಎಲ್. ಶೆಟ್ಟಿ, ಸುರೇಂದ್ರ ಶೆಟ್ಟಿ, ಮಂಜುನಾಥ ಶೆಟ್ಟಿ, ಕರುಣಾಕರ ಅಮೀನ್, ದಯಾನಂದ ಪೂಜಾರಿ, ಗಣೇಶ ಕುಲಾಲ್, ರಾಜೇಶ್ ರೈ, ತಾರಾನಾಥ್ ಶೆಟ್ಟಿ ವಸಾಯಿ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ – ಸೆ. 22ರಂದು ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ,

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk

ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ ಗೋರೆಗಾಂವ್, ಬ್ರಹ್ಮಕಲಶೋತ್ಸವ. ಡಿ.10 ರಂದು  ನೂತನ ಬಿಂಬದ ವೈಭವೋಪೇತ ಮೆರವಣಿಗೆ.

Mumbai News Desk

ಡೊಂಬಿವಲಿ: ಜಗಜ್ಯೋತಿ ಕಲಾವೃಂದದಿಂದ ಫೆ. 15 ರಂದು ಮಹಾಶಿವರಾತ್ರಿ ಪೂಜೆ

Mumbai News Desk

ಮದರ್ ಇಂಡಿಯಾ ಫ್ರೀ ನೈಟ್ ಹೈಸ್ಕೂಲ್ ನ 19ನೇ ಈಸ್ಟ್ ಬಾಂಬೆ ಸ್ಕೌಟ್ ಗ್ರೂಪ್ ವತಿಯಿಂದ ಸೆ. 14, 15ರಂದು ಗುರುವಂದನೆ ಮತ್ತು ತವರೂರು ಕಾಣಿಕೆ ಕಾರ್ಯಕ್ರಮ

Mumbai News Desk

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk