30.9 C
Mumbai
June 8, 2026
Mumbai News Kannada
ಪ್ರಕಟಣೆ

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ





ವಸಾಯಿ ಪರಿಸರದ ತುಳು- ಕನ್ನಡಿಗರ ಸುಪರಿಚಿತ ಮಣಿಕಂಠ ಸೇವಾ ಸಮಿತಿ ವಸಾಯಿ ಇವರ 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ.9 ರಂದು ಮಂಗಳವಾರ, ವಸಾಯಿ ಪಶ್ಚಿಮದ ದತ್ತಾನಿ ಸ್ಕ್ವೇರ್ ಬಳಿಯ ಯುನಿಟಿ ಮಾಲ್ ನ ಅರ್ನ ಸ್ವರ್ಣ ಬ್ಯಾಂಕ್ವೆಟ್ ಹಾಲ್ ನ 3ನೇ ಮಹಡಿಯಲ್ಲಿ ಜರಗಲಿದೆ.
ಅಂದು ಬೆಳಗ್ಗೆ ಗಂಟೆ 6.30ಕ್ಕೆ ಶ್ರೀಕ್ರಷ್ಣ ಭಟ್ ಅವರ ಪೌರೋಹಿತ್ಯದಲ್ಲಿ ಗಣ ಹೋಮ, ಗಂಟೆ 9.30ಕ್ಕೆ ಸ್ಥಳೀಯ ಮಹಿಳೆಯರಿಂದ ಭಜನೆ, 11ಕ್ಕೆ ಶ್ರೀ ನಾರಾಯಣ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ ಬಳಿಕ ಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಲಿಯುಗದ ವರದ ಶ್ರೀ ಅಯ್ಯಪ್ಪ ಸ್ವಾಮಿ ಪ್ರಸಾದವನ್ನು ಸ್ವೀಕರಿಸಬೇಕೆಂದು ಮಣಿಕಂಠ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ಕರ್ನೂರು ಶಂಕರ ಆಳ್ವ, ಅಧ್ಯಕ್ಷರಾದ ಯಶೋಧರ ವಿ. ಕೋಟ್ಯಾನ್ ಕಾಪು, ಉಪಾಧ್ಯಕ್ಷರಾದ ಎಕ್ಕಾರು ದಿನೇಶ್ ಹೆಗ್ಡೆ, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿಗಳಾದ ರಾಧಾಕ್ರಷ್ಣ ಶೆಟ್ಟಿ, ಜತೆ ಕೋಶಾಧಿಕಾರಿ ಸುಧೀರ್ ಸಾಲ್ಯಾನ್, ಪೂಜಾ ಸಮಿತಿ ಸಲಹೆಗಾರರಾದ ಜಗದೀಶ್ ಎಸ್ ಶೆಟ್ಟಿ, ಮತ್ತು ಉಮೇಶ್ ಕಾಂತಾವರ, ಮುಖ್ಯ ಸಲಹೆಗಾರರಾದ ನಾಗರಾಜ ಶೆಟ್ಟಿ, ಅಶೋಕ್ ಶೆಟ್ಟಿ, ಪಾಂಡು ಎಲ್. ಶೆಟ್ಟಿ, ಸುರೇಂದ್ರ ಶೆಟ್ಟಿ, ಮಂಜುನಾಥ ಶೆಟ್ಟಿ, ಕರುಣಾಕರ ಅಮೀನ್, ದಯಾನಂದ ಪೂಜಾರಿ, ಗಣೇಶ ಕುಲಾಲ್, ರಾಜೇಶ್ ರೈ, ತಾರಾನಾಥ್ ಶೆಟ್ಟಿ ವಸಾಯಿ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ : ಆಗಸ್ಟ್ 10ರಂದು “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ – 10.2.26ರಿಂದ 23.02.26ರ ವರೆಗೆ “ವರ್ಷಾವಧಿ ಉತ್ಸವ”

Mumbai News Desk

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.

Mumbai News Desk

ಎ.14 : ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk

ಸೆ.5 ರಂದು ಅಂಧೇರಿ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತುಳು ಹರಿಕಥೆಯ ನಾದ ಲಹರಿ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.

Mumbai News Desk