32 C
Mumbai
March 7, 2026
Mumbai News Kannada
ಪ್ರಕಟಣೆ

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”





ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ “ಬಂಟ ವಿಭೂಷಣ ಪ್ರಶಸ್ತಿ” ಪ್ರದಾನ

​ದುಬೈ: ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮವು ಡಿ. 14 ರಂದು ದುಬೈ ನಗರದ ಶೇಖ್ ಝಯೀದ್ ರಸ್ತೆಯಲ್ಲಿರುವ ಮಿಲೇನಿಯಂ ಪ್ಲಾಜಾ ಡೌನ್‌ಟೌನ್ ಹೋಟೆಲ್ (ಹಳೆಯ ಕ್ರೌನ್ ಪ್ಲಾಜಾ) ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಯುಎಇ ಬಂಟರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪ್ರತಿಷ್ಠಿತ “ಬಂಟ ವಿಭೂಷಣ ಪ್ರಶಸ್ತಿ” ಪ್ರದಾನದೊಂದಿಗೆ ಜರುಗಲಿದೆ.

​ ಸಾಂಸ್ಕೃತಿಕ ಕಾರ್ಯಕ್ರಮಗಳು

​ಯುಎಇ ಬಂಟ ಬಾಂಧವರಿಂದ ಹಲವು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಅವುಗಳೆಂದರೆ:

  • ​ತುಳುನಾಡ ಮಣ್ಣ್‌ದ ಮಹಿಮೆ (ತುಳುನಾಡಿನ ಮಹಿಮೆ).
  • ​ಭಾರತದ ಸಂಸ್ಕೃತಿಯ ಪಯಣ.
  • ​ಬಂಟೆರ್ನ ಐಸಿರ (ಬಂಟರ ವೈಭವ).
  • ​ಕಿರುಚಿತ್ರ ಸ್ಪರ್ಧೆ.

​ “ಬಂಟ ವಿಭೂಷಣ ಪ್ರಶಸ್ತಿ” ಪ್ರದಾನ

​ಪ್ರತಿ ವರ್ಷ ನೀಡಲಾಗುವ ಯುಎಇ ಬಂಟರ ಪ್ರತಿಷ್ಠಿತ “ಬಂಟ ವಿಭೂಷಣ ಪ್ರಶಸ್ತಿ”ಯನ್ನು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಮಂಗಳೂರು ಕಂಬಳದ ರೂವಾರಿಯೂ ಆಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ನೀಡಿ ಗೌರವಿಸಲಾಗುವುದು.

​ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಚಿತ್ರರಂಗದ ನಟ, ‘ಡಿವೈನ್ ಸ್ಟಾರ್’ ರಿಷಭ್ ಶೆಟ್ಟಿ ಮತ್ತು ಬಾಲಿವುಡ್ ನಟ ವಿವೇಕ್ ಒಬೆರಾಯ್ ರವರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಸಂಪೂರ್ಣ ನಿರೂಪಣೆಯನ್ನು ಚಿತ್ರನಟ ಸಾಯಿಲ್ ರೈ ಮತ್ತು ನಯನ ಶೆಟ್ಟಿಯವರು ಮಾಡಲಿದ್ದಾರೆ.

​ಯುಎಇ ಬಂಟ್ಸ್‌ನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯುಎಇಯಲ್ಲಿರುವ ಎಲ್ಲ ಬಂಟ ಬಾಂಧವರು 48ನೇ ವರ್ಷದ ಈ ಮಹಾಸಮಾಗಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ವಿಶೇಷ ಸೂಚನೆ: ಬೆಳಿಗ್ಗೆ ಹತ್ತು ಗಂಟೆಯೊಳಗೆ ಆಗಮಿಸುವವರಿಗೆ ಉಚಿತ ಪ್ರವೇಶ ಮತ್ತು ಎಂಟು ಗ್ರಾಂ ಚಿನ್ನದ ನಾಣ್ಯ ಗೆಲ್ಲುವ ಅವಕಾಶ ಇರುವುದಾಗಿ ಅವರು ತಿಳಿಸಿದ್ದಾರೆ.

​ಪತ್ರಿಕಾಗೋಷ್ಠಿಯಲ್ಲಿ ಯುಎಇ ಬಂಟ್ಸ್‌ನ ಪೋಷಕರಾದ ಸರ್ವೋತ್ತಮ ಶೆಟ್ಟಿ, ಉಪಾಧ್ಯಕ್ಷರಾದ ಪ್ರೇಮ್ ನಾಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಮತ್ತು 2025ರ ಸಾಲಿನ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ವರದಿ: ವಿಜಯಕುಮಾರ್ ಶೆಟ್ಟಿ ಗಾಣದಮೂಲೆ, ದುಬೈ



Related posts

ಜು.21, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ : ಮಾ. 8ರಿಂದ 10ನೇ ವಾರ್ಷಿಕೋತ್ಸವ

Mumbai News Desk

ನ.21 ರಂದು ಬಿಲ್ಲವರ ಅಸೋಸಿಯೇಷನ್, ಮುಂಬಯಿ – ಕಲ್ವಾ ಸ್ಥಳೀಯ ಕಛೇರಿಯ ರಜತ ಮಹೋತ್ಸವದ ಸಂಭ್ರಮ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಾರು ಮೂಡಬಿದಿರೆ : ಮೇ.3-4 ಶತಮಾನೋತ್ಸವ ಸಂಭ್ರಮ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ

Mumbai News Desk