30 C
Mumbai
April 24, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ





​ಡಿ. 14ರಂದು ಉದ್ಘಾಟನಾ ಸಮಾರಂಭ; ‘ಶ್ರೀ ಕೃಷ್ಣ ಪಾರಿಜಾತ’ ಯಕ್ಷಗಾನ ಪ್ರದರ್ಶನ

ಡೊಂಬಿವಲಿ: ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ದಶಮಾನೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭವನ್ನು ಡಿ. 14, 2025ರ ರವಿವಾರದಂದು ಹಮ್ಮಿಕೊಳ್ಳಲಾಗಿದೆ. ಡೊಂಬಿವಲಿ ಪೂರ್ವದ ಬೋಪರ್ ರಸ್ತೆ, ನಾಂದಿವಲಿಯಲ್ಲಿರುವ ವರದ ಸಿದ್ದಿವಿನಾಯಕ ಸಭಾಗೃಹದಲ್ಲಿ ಅಂದು ಸಂಜೆ 3.30ರಿಂದ ಈ ಕಾರ್ಯಕ್ರಮವು ನಡೆಯಲಿದೆ.

​ಸಮಾರಂಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದು, ಸಿರಿಕಲಾ ಮೇಳ, ಬೆಂಗಳೂರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅಜಪುರದ ಸುಬ್ಬ ವಿರಚಿತ ಪೌರಾಣಿಕ ಯಕ್ಷಗಾನವಾದ **’ಶ್ರೀ ಕೃಷ್ಣ ಪಾರಿಜಾತ’**ವನ್ನು ಪ್ರದರ್ಶಿಸಲಾಗುವುದು.

​ಸಭಾ ಕಾರ್ಯಕ್ರಮ:

​ಸಂಘದ ಅಧ್ಯಕ್ಷರಾದ ಸಂತೋಷ್ ಕೆ. ಪುತ್ರನ್ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವು ಮಧ್ಯಂತರದಲ್ಲಿ ಜರುಗಲಿದೆ. ಸಂಘದ ಗೌರವ ಅಧ್ಯಕ್ಷರಾದ ಸುರೇಶ ಆರ್. ಕಾಂಚನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಸಂಘದ ಉಪಾಧ್ಯಕ್ಷರಾದ ಮಹಾಬಲ ಎಮ್. ಕುಂದರ್ ಅವರು ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಸಂಘದ ಉಪಾಧ್ಯಕ್ಷರಾದ ರಮೇಶ ಬಂಗೇರ, ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಲಿ ಶಾಖೆಯ ಕಾರ್ಯಾಧ್ಯಕ್ಷರಾದ ಯಧುವೀರ ಬಿ. ಪುತ್ರನ್, ಸಂಘದ ಮಾಜಿ ಅಧ್ಯಕ್ಷರಾದ ಗೋಪಾಲ ಎಸ್. ಪುತ್ರನ್, ಡೊಂಬಿವಲಿ ಪರಿಸರದ ಸಮಾಜ ಸೇವಕ ಮತ್ತು ಹೋಟೆಲ್ ಉದ್ಯಮಿ ಹರೀಶ್ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ, ಹೋಟೆಲ್ ಉದ್ಯಮಿಗಳಾದ ಶಂಕರ ಪೂಜಾರಿ ಮತ್ತು ಲಕ್ಷ್ಮಣ ಪೂಜಾರಿ, ಹಾಗೂ ಹೋಟೆಲ್ ಸ್ಟೇಟಸ್‌ನ ಉದ್ಯಮಿ ರತ್ನಾಕರ್ ಚಂದನ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

​ಡೊಂಬಿವಲಿ ಸ್ಥಳೀಯ ಕಚೇರಿಯ ಈ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಘದ ಸದಸ್ಯ ಬಾಂಧವರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಘದ ಕಾರ್ಯದರ್ಶಿ ಗಣೇಶ್ ಮೆಂಡನ್, ಕೋಶಾಧಿಕಾರಿ ನಾಗರಾಜ ಶ್ರೀಯಾನ್, ಡೊಂಬಿವಲಿ ಸ್ಥಳೀಯ ಕಚೇರಿಯ ಗೌ. ಕಾರ್ಯಾಧ್ಯಕ್ಷ ಭಾಸ್ಕರ್ ಎನ್. ಕಾಂಚನ್, ಕಾರ್ಯಾಧ್ಯಕ್ಷ ರಾಜು ಎ. ಮೊಗವೀರ, ಕಾರ್ಯದರ್ಶಿ ಸಂತೋಷ್ ಬಿ. ಪುತ್ರನ್, ಕೋಶಾಧಿಕಾರಿ ಶೇಖರ್ ಎಸ್. ನಾಯ್ಕ, ಗೌ. ಅಧ್ಯಕ್ಷರು, ಕಾರ್ಯಾಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವಿಭಾಗ, ಕುಂದಾಪುರ, ಮೀರಾರೋಡ್, ಥಾಣೆ ಸ್ಥಳೀಯ ಕಚೇರಿಗಳು ಮತ್ತು ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಬಗ್ವಾಡಿ ಇವರು ಜಂಟಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಡಿ. 24ರಂದು ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk