September 6, 2026
Mumbai News Kannada
ಪ್ರಕಟಣೆ

ಮುಂಬಯಿ ಕನ್ನಡ ಸಂಘ: ಡಿ. 20ರಂದು ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮ






​ಕಳೆದ ಒಂಭತ್ತು ದಶಕಗಳಿಗೂ ಹೆಚ್ಚು ಸಮಯದಿಂದ ಕನ್ನಡ ನಾಡು ಸುಡಿಯ ಸೇವೆಯಲ್ಲಿ ನಿರತವಾಗಿದ್ದು ಇದೀಗ ಶತಮಾನದತ್ತ ಸಾಗುತ್ತಿರುವ ಮಾಟುಂಗಾ ಪೂರ್ವದ ಮುಂಬಯಿ ಕನ್ನಡ ಸಂಘದ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
​ಖಾಲ್ಸಾ ಕಾಲೇಜು ಕನ್ನಡ ಪ್ರೇಮಿ ಮಂಡಳಿ ದತ್ತಿ ನಿಧಿಯ ಪರವಾಗಿ ಮುಂಬಯಿಯ ಉದಯೋನ್ಮುಖ ಕವಯಿತ್ರಿ, ಲೇಖಕಿ ದೀಪಾ ಹರೀಶ್‌ ಶೆಟ್ಟಿಯವರು “ಇಂದಿನ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ.
​ದಿ. ಜಿ. ವಿ. ರಂಗಸ್ವಾಮಿ ದತ್ತಿ ನಿಧಿಯ ಪರವಾಗಿ ಮಹಾಪೌರ ಆದರ್ಶ ಶಿಕ್ಷಕ ಪುರಸ್ಕಾರ ಪಡೆದಿರುವ ಶಿಕ್ಷಕ ಮಹದೇವ ಸಿದಮಲ್ಲಾ ಜಾವೀರರು “ನವಭಾರತದ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ.
​ಮುಂಬಯಿಯ ಹಿರಿಯ ಸಾಹಿತಿ ಡಾ. ಸುಮಾ ದ್ವಾರಕಾನಾಥ್‌ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗುರುರಾಜ್‌ ಎಸ್‌. ನಾಯಕ್‌ ಅಧ್ಯಕ್ಷತೆ ವಹಿಸಲಿದ್ದು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್‌. ಕಕೇರರರು ಕಾರ್ಯಕ್ರಮದ ನಿರ್ವಹಣೆ ಮಾಡುತ್ತಾರೆ.
​ಇದೇ ಸಂದರ್ಭದಲ್ಲಿ ಮುಂಬಯಿ ವಿಶ್ವವಿದ್ಯಾಲದಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆಸಲಾದ ಕನ್ನಡ ಎಂ.ಎ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿಕ್ರಂ ಜೋಶಿಯವರನ್ನು ಸಂಘದ ನಗದು ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.
​ಶನಿವಾರ ದಿನಾಂಕ 20-12-2025 ರಂದು ಸಂಜೆ ಗಂಟೆ 5-00ಕ್ಕೆ ಮೈಸೂರು ಅಸೋಸಿಯೇನ್‌ನ ತಳಮಹಡಿ ಸಭಾಗೃಹದಲ್ಲಿ ಈ ಕಾರ್ಯಕ್ರಮವು ಜರುಗಲಿದೆ. ಕಾರ್ಯಕ್ರಮದಲ್ಲಿ ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಹಾಜರಿರಬೇಕಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್‌. ಕರ್ಕೇರರು ಹಾಗೂ ಗೌರವ ಜೊತೆ ಕಾರ್ಯದರ್ಶಿ ರಾಮಚಂದ್ರ ಭಟ್‌ ವಿನಂತಿಸಿಕೊಂಡಿದ್ದಾರೆ.

​ಸೋಮನಾಥ ಎಸ್‌. ಕರ್ಕೇರ, ಫೋನ್‌: 9819321186



Related posts

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಡಾ.ಎಂ. ಅಣ್ಣಯ್ಯ ಕುಲಾಲ್ ಅವರು “ವೈದ್ಯ ಸಿಂಧೂರ” ಪ್ರಶಸ್ತಿ

Mumbai News Desk

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಮಹಾವಿಷ್ಣು ಮಂದಿರ: ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ

Mumbai News Desk

ವಿದ್ಯಾವಿಹಾರ್ ದೇವಸ್ಥಾನದಲ್ಲಿ ನಾಳೆ (ಮಾರ್ಚ್ 15) ‘ಶ್ರೀ ರಾಮ ವನಗಮನ’ ತಾಳಮದ್ದಳೆ: ಇಬ್ಬರು ಹಿರಿಯ ಕಲಾವಿದರಿಗೆ ಸನ್ಮಾನ

Mumbai News Desk

ಮಾ.7: ಸಸಿಹಿತ್ಲು ಭಗವತಿಗೆ ಕಲಾಸೌರಭದ ಸ್ವರ ಸಂಗೀತಾಭಿಷೇಕಂ

Mumbai News Desk

ಡೊಂಬಿವಿಲಿ ಕನ್ನಡಿಗರ ಸ್ನೇಹ ಬಳಗ – ಸೆ.28 ರಂದು ನವರಾತ್ರಿ ವಿಶೇಷ: ಅರಿಶಿನ-ಕುಂಕುಮ ಕಾರ್ಯಕ್ರಮ

Mumbai News Desk